Advertisement
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನರೇಂದ್ರಮೋದಿ ಅವರು ಪ್ರಧಾನಿಯಾದ ಮೇಲೆ ಕಳೆದ ನಾಲ್ಕೂವರೆ ವರ್ಷಗಳಲ್ಲಿ ದೇಶದಲ್ಲಿ ವೈಷಮ್ಯದ ವಾತಾವರಣ ನಿರ್ಮಾಣವಾಗಿದೆ. ದೇಶದಲ್ಲಿ ಉದ್ಯೋಗ ಸೃಷ್ಟಿಯಾಗದೇ ಇರುವುದರಿಂದ ಯುವಕರು ನಿರುದ್ಯೋಗಿಗಳಾಗುತ್ತಿದ್ದಾರೆ,
Related Articles
Advertisement
ಪ್ರಧಾನಿ ಮೌನ: ಎಲ್ಲ ವಿಚಾರವನ್ನೂ ಮಾತನಾಡುವ, ಟ್ವೀಟ್ ಮಾಡುವ ಪ್ರಧಾನಿ ಮೋದಿ ಅವರು, ಬಲಪಂಥೀಯರು ಸಂವಿಧಾನ ಸುಟ್ಟಿದ್ದನ್ನು ಖಂಡಿಸುವ ಕೆಲಸ ಮಾಡುವುದಿಲ್ಲ. ತಮ್ಮದೇ ಸಚಿವರು ಸಂವಿಧಾನವನ್ನೂ ಬದಲಾಯಿಸಲೇ ನಾವು ಅಧಿಕಾರಕ್ಕೆ ಬಂದಿರುವುದು ಎಂದು ಹೇಳಿಕೆ ಕೊಟ್ಟರೂ ಮೌನವಹಿಸುತ್ತಾರೆ.
ಕಾಶ್ಮೀರದಲ್ಲಿ ಅತ್ಯಾಚಾರ ಆರೋಪಿಯ ಮೆರವಣಿಗೆಯಲ್ಲಿ ಸಚಿವರು ಪಾಲ್ಗೊಳ್ಳುತ್ತಾರೆ. ಇದ್ಯಾವುದರ ಬಗ್ಗೆಯೂ ಪ್ರಧಾನಿ ಮಾತನಾಡುವುದಿಲ್ಲ, ಖಂಡಿಸುವುದೂ ಇಲ್ಲ. ಪ್ರಧಾನಿ ಅವರದು ಮೌನಂ ಸಮ್ಮತಿ ಲಕ್ಷಣ ಎನ್ನುವಂತಿದೆ ಎಂದು ಟೀಕಿಸಿದರು. ಮೋದಿಯವರ ಸ್ನೇಹಿತರು ಬ್ಯಾಂಕ್ಗಳನ್ನು ಲೂಟಿ ಮಾಡಿ ದೇಶ ಬಿಟ್ಟು ಓಡಿ ಹೋಗಿದ್ದಾರೆ,
ಇದೆಲ್ಲಾ ಗೊತ್ತಿದ್ದೂ ಮೋದಿ ಏನೂ ಮಾಡಲಿಲ್ಲ, ನಾಲ್ಕೂವರೆ ವರ್ಷಗಳಿಂದ ಲೋಕಪಾಲ ನೇಮಕ ಮಾಡಲಿಲ್ಲ, ಮಹಾದಾಯಿ ವಿಚಾರದಲ್ಲಿ ರಾಜಕೀಯ ಮಾಡಿದ್ದೂ ಬಿಟ್ಟರೆ, ಸಮಸ್ಯೆಗೆ ಪರಿಹಾರ ಕಲ್ಪಿಸಲಿಲ್ಲ ಬಿಜೆಪಿಯನ್ನು ಟೀಕೆ ಮಾಡುವವರೆಲ್ಲಾ ದೇಶದ್ರೋಹಿಗಳಾ ಎಂದು ಪ್ರಶ್ನಿಸಿದ ಅವರು, ಬಿಜೆಪಿ ಬೊಗಳೆ ದಾಸರ ಪಕ್ಷ ಎಂದು ಜರಿದರು.
ಸುಭದ್ರವಾಗಿದೆ: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ. ಈ ಸರ್ಕಾರ ರಚನೆಯಾದ ಮೊದಲ ದಿನದಿಂದಲೂ ಯಡಿಯೂರಪ್ಪ ಅವರು ಕಾಂಗ್ರೆಸ್ನಿಂದ ಇಷ್ಟು ಶಾಸಕರು ಬರುತ್ತಾರೆ ಎಂದು ಹೇಳುತ್ತಲೇ ಬಂದಿದ್ದಾರೆ. ಇದನ್ನು ನೋಡಿದರೆ, ಯಡಿಯೂರಪ್ಪ ಅವರು ಶಾಸಕರನ್ನು ಖರೀದಿ ಮಾಡಲು ತಯಾರಾಗಿದ್ದಾರೆ ಎಂಬುದನ್ನು ತೋರಿಸುತ್ತದೆ ಎಂದು ಟೀಕಿಸಿದರು.
ಸಂಸದ ಆರ್.ಧ್ರುವನಾರಾಯಣ, ಶಾಸಕರಾದ ತನ್ವೀರ್, ಡಾ.ಯತೀಂದ್ರ ಸಿದ್ದರಾಮಯ್ಯ, ಅನಿಲ್ ಚಿಕ್ಕಮಾದು, ಮಾಜಿ ಸಚಿವ ಸಿ.ಎಚ್.ವಿಜಯಶಂಕರ್, ಎಐಸಿಸಿ ಮಾಜಿ ಕಾರ್ಯದರ್ಶಿ ಸೂರಜ್ ಹೆಗಡೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ನಗರ ಅಧ್ಯಕ್ಷ ಆರ್.ಮೂರ್ತಿ ಹಾಜರಿದ್ದರು.