Advertisement

Madikeri ಕರಿಕೆಯಲ್ಲಿ ಕಾಡಾನೆಗಳಿಂದ ಕೃಷಿ ನಾಶ, ಆತಂಕ ಸೃಷ್ಟಿ

11:25 PM Dec 09, 2023 | Team Udayavani |

ಮಡಿಕೇರಿ: ಕೊಡಗಿನ ಗಡಿ ಗ್ರಾಮ ಕರಿಕೆಯ ಪಚ್ಚೆಪಿಲಾವು ಭಾಗದಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದೆ. ತೋಟಗಳಿಗೆ ನುಗ್ಗಿ ಕೃಷಿ ಫ‌ಸಲನ್ನು ನಾಶಪಡಿಸುತ್ತಿರುವ ಗಜ ಹಿಂಡು ಗ್ರಾಮದಲ್ಲಿ ಆತಂಕ ಸೃಷ್ಟಿಸಿದೆ.

Advertisement

ಸ್ಥಳೀಯ ನಿವಾಸಿ ಎಚ್‌.ಎಂ. ನಂಜುಂಡ ಅವರ ತೋಟಕ್ಕೆ ನುಗ್ಗಿರುವ ಕಾಡಾನೆಗಳು ಕರಿಮೆಣಸು, ಬಾಳೆ, ಅಡಿಕೆ ಮರಗಳು ಮತ್ತು ಸ್ಪ್ರಿಂಕ್ಲರ್‌ಗಳನ್ನು ನಾಶಪಡಿಸಿವೆ. ಅಕ್ಕಪಕ್ಕದ ತೋಟಗಳಿಗೂ ನುಗ್ಗಿ ನಷ್ಟವನ್ನುಂಟು ಮಾಡಿವೆ.

ಪ್ರತೀವರ್ಷ ಕೈಗೆ ಬಂದ ತುತ್ತು ಬಾಯಿಗೆ ಬಾರದ ಪರಿಸ್ಥಿತಿ ಎದುರಾಗುತ್ತಿದ್ದು, ಫ‌ಸಲು ಕಾಡಾನೆಗಳ ಹೊಟ್ಟೆ ಸೇರುತ್ತಿದೆ ಎಂದು ಕೃಷಿಕರು ಅಳಲು ತೋಡಿಕೊಂಡಿದ್ದಾರೆ. ಗ್ರಾಮದಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಬೇಕು, ದಾಳಿಯನ್ನು ನಿಯಂತ್ರಿಸಲು ಆನೆ ಕಂದಕಗಳನ್ನು ನಿರ್ಮಿಸಬೇಕು ಮತ್ತು ಆನೆಗಳಿಂದ ಉಂಟಾದ ಬೆಳೆ ನಷ್ಟಕ್ಕೆ ಶೀಘ್ರ ಪರಿಹಾರ ವಿತರಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next