Advertisement

ಬಾಲ ಕಾರ್ಮಿಕರನ್ನು ಪತ್ತೆ ಹಚ್ಚಿ: ವಣಿಕ್ಯಾಳ

03:48 PM Sep 30, 2021 | Team Udayavani |

ಕಲಬುರಗಿ: ಜಿಲ್ಲೆಯಲ್ಲಿರುವ ಬಾಲ ಕಾರ್ಮಿಕ ಮಕ್ಕಳನ್ನು ವಿಶೇಷ ಸಮೀಕ್ಷೆ ಮೂಲಕ ಪತ್ತೆ ಹಚ್ಚಬೇಕೆಂದು ಅಪರ ಜಿಲ್ಲಾಧಿಕಾರಿ ಶಂಕರ ವಣಿಕ್ಯಾಳ ಅಧಿಕಾರಿಗಳಿಗೆ ಸೂಚಿನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಸಲಹಾ ಹಾಗೂ ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

Advertisement

ಪ್ರತಿ ತಾಲೂಕು ಮಟ್ಟದಲ್ಲಿ ಅಧಿಕಾರಿಗಳು ಸಕ್ರಿಯವಾಗಿ, ಕ್ರಿಯಾಶೀಲರಾಗಿ ಬಾಲ ಕಾರ್ಮಿಕ ಮಕ್ಕಳ ಪತ್ತೆಗಾಗಿ ಕಾರ್ಯನಿರ್ವಹಿಸಬೇಕು. ಅಲ್ಲದೇ ವೇಳಾಪಟ್ಟಿ ರೂಪಿಸಿಕೊಂಡು ತಹಶೀಲ್ದಾರ್‌ ಹಾಗೂ ಲೇಬರ್‌ ಅಧಿ ಕಾರಿಗಳ ಸಮ್ಮುಖದಲ್ಲಿ ದಿಢೀರ್‌ ದಾಳಿ ಮಾಡಿ, ಬಾಲ ಕಾರ್ಮಿಕ ಮಕ್ಕಳನ್ನು ಪತ್ತೆ ಹಚ್ಚಿ ಎಂದು ನಿರ್ದೇಶನ ನೀಡಿದರು.

ಸರಿಯಾದ ಯೋಜನೆ ಹಾಗೂ ಸರಿಯಾದ ಸರ್ವೇ ಮುಖಾಂತರ ಮಾತ್ರ ಬಾಲ ಕಾರ್ಮಿಕ ಮಕ್ಕಳನ್ನು ವಶಪಡಿಸಿಕೊಳ್ಳಲು ಸಾಧ್ಯ. ಮಕ್ಕಳನ್ನು ರಕ್ಷಣೆ ಮಾಡಿದ ನಂತರ ಅವರನ್ನು ಬಾಲ ಮಂದಿರದಲ್ಲಿ ಪುನರ್ವಸತಿ ಕೇಂದ್ರದಲ್ಲಿ ದಾಖಲು ಮಾಡಿಕೊಂಡು, ಮಕ್ಕಳಿಗೆ ಬಾಲ ಕಾರ್ಮಿಕ ಪದ್ಧತಿ ಬಗ್ಗೆ ತಿಳಿವಳಿಕೆ ನೀಡಬೇಕು ಎಂದರು. ಸಹಾಯಕ ಕಾರ್ಮಿಕ ಆಯುಕ್ತರಾದ ಸದಸ್ಯ ಕಾರ್ಯದರ್ಶಿ ಅವಿನಾಶ ನಾಯ್ಕ ಮಾತನಾಡಿ, ಜಿಲ್ಲೆಯ 11 ತಾಲೂಕುಗಳ 32 ಹೋಬಳಿಗಳಲ್ಲಿ
ಬಾಲ ಕಾರ್ಮಿಕ ಮಕ್ಕಳ ಪತ್ತೆಗೆ ಈಗಾಗಲೇ 2020-21ರಲ್ಲಿ 3.23 ಲಕ್ಷ ರೂ. ಹಾಗೂ 2021-22ರಲ್ಲಿ 1 ಮತ್ತು 2 ಕಂತಿನಲ್ಲಿ 1.70 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ.

ಕೋವಿಡ್‌ ಹಿನ್ನೆಲೆ ಯಾವುದೇ ತಪಾಸಣೆ ಮಾಡಲು ಸಾಧ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ಜಿಲ್ಲೆಯ ಪ್ರತಿ ತಾಲೂಕಿನಲ್ಲಿಯೂ ಬಾಲ ಕಾರ್ಮಿಕ ಮಕ್ಕಳ ಪತ್ತೆ ಕಾರ್ಯ ಶುರುವಾಗಲಿದೆ ಎಂದು ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಡಾ| ಯಲ್ಲಾಲಿಂಗ ಕಾಳನೂರು, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ಸಂತೋಷ ಕುಲಕರ್ಣಿ, ಲೀಡ್‌ ಬ್ಯಾಂಕನ ಮ್ಯಾನೇಜರ್‌ ಇಂತೆಸಾರ್‌ ಹುಸೇನ್‌ ಸೇರಿ ಸೊಸೈಟಿ
ಸದಸ್ಯರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next