Advertisement
ಪರಿಚಿತರ ಮನೆಯಲ್ಲಿ ಚಿನ್ನಾಭರಣ ಕಳವು ಮಾಡಿದ್ದ ಉತ್ತರಪ್ರದೇಶ ಮೂಲದ ಯುವಕನನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ. ಉತ್ತರಪ್ರದೇಶ ಮೂಲದ ಚಿಕ್ಕಬಳ್ಳಾಪುರದ ಚಿಂತಾಮಣಿ ನಿವಾಸಿ ಮಹಮದ್ ಸಾಜಿದ್ (20) ಬಂಧಿತ. ಈತನಿಂದ 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ, 2.50 ಲಕ್ಷ ರೂ.ನಗದು ವಶಪಡಿಸಿಕೊಳ್ಳಲಾಗಿದೆ ಎಂದು ದಕ್ಷಿಣ ವಲಯ ಡಿಸಿಪಿ ಅಣ್ಣಾಮಲೈ ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
Related Articles
Advertisement
ಮತ್ತೂಂದು ಪ್ರಕರಣದಲ್ಲಿ ಮೋಜಿನ ಜೀವನಕ್ಕಾಗಿ ಮನೆಗಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೊಮ್ಮನಹಳ್ಳಿ ನಿವಾಸಿ ಸೈಯದ್ ಇಮ್ರಾನ್ ಅಲಿಯಾಸ್ ಕಾಲು (22) ಮತ್ತು ಸೋಮೇಶ್ವರನಗರ ನಿವಾಸಿ ವಸೀಂ ಅಕ್ರಂ ಅಲಿಯಾಸ್ ಬ್ಲೇಡ್ (26)ಬಂಧಿತರು. ಆರೋಪಿಗಳಿಂದ 30 ಲಕ್ಷ ರೂ. ಮೌಲ್ಯದ 940 ಗ್ರಾಂ. ಚಿನ್ನಾಭರಣ, 6.5 ಕೆ.ಜಿ. ಬೆಳ್ಳಿ ವಸ್ತು ವಶಕ್ಕೆ ಪಡೆಯಲಾಗಿದೆ ಎಂದು ಅವರು ಹೇಳಿದರು.
ಆರೋಪಿ ಸೈಯದ್ ಇಮ್ರಾನ್, ಮಂಗಮನಪಾಳ್ಯದಲ್ಲಿ ಅಯೂಬ್ ಎಂಬುವರ ಮೀನಿನ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ. 2011ರಿಂದ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿದ್ದ. ಈತನ ವಿರುದ್ಧ ಮನೆಗಳ್ಳತನ ಪ್ರಕರಣ ಮಾತ್ರವಲ್ಲದೆ, ಮೊಬೈಲ್ ಕಳವು, ಕೊಲೆ ಯತ್ನ, ಕೊಲೆ ಪ್ರಕರಣಗಳು ಕೂಡ ದಾಖಲಾಗಿವೆ. ಹಿಂದೆ ಬಿಟಿಎಂ ಲೇಔಟ್ನಲ್ಲಿ ಸ್ಯಾಮ್ಸಾಂಗ್ ಶೋರೂಂನಲ್ಲಿ ಕೆಲಸ ಮಾಡಿಕೊಂಡಿದ್ದ ವಸೀಂ ಅಕ್ರಂ, ಸದ್ಯ ಮಾವ ಕಲೀಂ ಜತೆ ಟೈಲ್ಸ್ ಕೆಲಸಕ್ಕೆ ಹೋಗುತ್ತಿದ್ದ. ಈತ ಕೂಡ 2012ರಿಂದ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾನೆ ಎಂದು ಡಿಸಿಪಿ ಅಣ್ಣಾಮಲೈ ಹೇಳಿದರು.