Advertisement

ವಿಜಯಪುರ ಮರ್ಯಾದಾ ಹತ್ಯೆ: ನಾಲ್ವರು ಆರೋಪಿಗಳ ಬಂಧನ

10:06 PM Jun 24, 2021 | Team Udayavani |

ವಿಜಯಪುರ : ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಸಲಾದಹಳ್ಳಿಯಲ್ಲಿ ಎರಡು ದಿನಗಳ ಹಿಂದೆ ನಡೆದಿದ್ದ ಮರ್ಯಾದಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ತಂದೆ ಸೇರಿದಂತೆ ನಾಲ್ಕು ಜನ ಆರೋಪಿಗಳನ್ನು ಬಂಧಿಸುವಲ್ಲಿ ಜಿಲ್ಲೆಯ ಪೊಲೀಸರು ಯಶಸ್ವಿಯಾಗಿದ್ದಾರೆ‌.

Advertisement

ಮರ್ಯಾದಿ ಹತ್ಯೆಯಲ್ಲಿ ಮೃತಪಟ್ಟ ಯುವತಿಯ ತಂದೆ ಬಂದಗಿಸಾಬ್ ತಂಬದ್ (50), ಸಹೋದರ ದಾವಲ್‌ ಪಟೇಲ್ (20), ಅಳಿಯಂದಿರಾದ ಅಲ್ಲಾ ಪಟೇಲ್ (29) ರಫೀಕ್ (24) ಎಂಬವರೇ ಬಂಧಿತರು ಎಂದು ಗುರುತಿಸಲಾಗಿದೆ.

ತಲೆ ಮರೆಸಿಕೊಂಡಿರುವ ಇನ್ನೋರ್ವ ಆರೋಪಿ ಲಾಳೆಸಾಬ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.  ಈ ಸಂಬಂಧ ಕಲಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದನ್ನು ಇಲ್ಲಿ ಸ್ಮರಿಸಬಹುದು.

Advertisement

Udayavani is now on Telegram. Click here to join our channel and stay updated with the latest news.

Next