Advertisement
ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಸಾದಲಿ ಶಕ್ತಿ ಕೇಂದ್ರದಲ್ಲಿ ಶಿಡ್ಲಘಟ್ಟ ಭಾರತೀಯ ಜನತಾ ಪಾರ್ಟಿ ಗ್ರಾಮಾಂತರ ಮಂಡಲ ವತಿಯಿಂದ ಪ್ರಧಾನಮಂತ್ರಿ ಹುಟ್ಟು ಹಬ್ಬದ ಅಂಗವಾಗಿ ಹಿರಿಯರು ಮತ್ತು ಅಂಗವಿಕಲರಿಗೆ ಹಣ್ಣುಹಂಪಲು ಮತ್ತು ಸಿಹಿ ಹಂಚಿಕೆ ಮಾಡಿ ಮಾತನಾಡಿದ ಅವರು, ಯುವಕರನ್ನು ಮಾದಕ ವಸ್ತುಗಳಿಂದ ದೂರ ಇಡಲು ಮತ್ತು ರಾಜ್ಯವನ್ನು ಡ್ರಗ್ಸ್ ಮುಕ್ತ ಮಾಡಲು ಎಲ್ಲರು ಸಹಕರಿಸಬೇಕೆಂದು ಮನವಿ ಮಾಡಿದರು. ಗ್ರಾಮಾಂತರ ಮಂಡಲ ವತಿಯಿಂದ ಸಾದಲಿ, ಬಶೆಟ್ಟಹಳ್ಳಿ ಸೇರಿದಂತೆ 6 ಹೋಬಳಿಯಲ್ಲಿ ಅಂಗವಿಕಲರಿಗೆ ಮತ್ತು ಹಿರಿಯರನ್ನು ಗುರುತಿಸಿ 70 ಜನಕ್ಕೆ ಹಣ್ಣು, ಸಿಹಿ ಹಂಚಿಕೆ ಮಾಡುವ ಮೂಲಕ ಪ್ರಧಾನಿ ಮೋದಿ ಅವರ ಹುಟ್ಟು ಹಬ್ಬ ಆಚರಿಸಿದರು.
Advertisement
ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಸಂಕಲ್ಪ
05:58 PM Sep 19, 2020 | Suhan S |
Advertisement
Udayavani is now on Telegram. Click here to join our channel and stay updated with the latest news.