Advertisement

Devanahalli ಭಾರಿ ಮಳೆ; ಅಮಿತ್ ಶಾ ರೋಡ್‌ ಶೋ ಮುಂದೂಡಿಕೆ

07:08 PM Apr 21, 2023 | Team Udayavani |

ಬೆಂಗಳೂರು : ಬೆಂಗಳೂರಿನ ದೇವನಹಳ್ಳಿಯಲ್ಲಿ ಶುಕ್ರವಾರ ಸಂಜೆ ನಡೆಯಬೇಕಾಗಿದ್ದ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ರೋಡ್‌ ಶೋ ಕಾರ್ಯಕ್ರಮ ಮುಂದೂಡಲಾಗಿದೆ.

Advertisement

ಬೃಹತ್‌ ರೋಡ್‌ ಶೋ ಆರಂಭಕ್ಕೆ ಮುನ್ನ ಭಾರಿ ಮಳೆ ಸುರಿದು, ಬಳಿಕವೂ ಮುಂದುವರಿದ ಕಾರಣ ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ.

ರೋಡ್ ಶೋ ರದ್ದಾದ ವಿಚಾರ ತಿಳಿಯುತ್ತಿದ್ದಂತೆ ಅಮಿತ್ ಶಾ ಅವರನ್ನು ಸ್ವಾಗತಿಸಲು ತರಿಸಲಾಗಿದ್ದ 250 ಕೆಜಿ ತೂಕದ ಬೃಹತ್ ಸೇಬಿನ ಹಾರವನ್ನು ಜನರು ಕ್ಷಣ ಮಾತ್ರದಲ್ಲೇ ಮುಗಿಬಿದ್ದು ಖಾಲಿ ಮಾಡಿದ್ದಾರೆ.

ಹಿರಿಯ ಬಿಜೆಪಿ ಕಾರ್ಯಕರ್ತರೊಬ್ಬರು ಮಳೆ ಬಂದ ವೇಳೆ ಒದ್ದೆಯಾದ ಮೋದಿ ಅವರ ಭಾವಚಿತ್ರವನ್ನು ತಮ್ಮ ಟವಲ್ ನಿಂದ ಒರೆಸಿ ಅಭಿಮಾನ ಮೆರೆದ ವಿಡಿಯೋ ವೈರಲ್ ಆಗುತ್ತಿದೆ. ಈ ವಿಡಿಯೋವನ್ನು ಬಿಜೆಪಿ ಟ್ವೀಟ್ ಮಾಡಿದೆ.

Advertisement

”ಪ್ರಧಾನಿ ನರೇಂದ್ರ ಮೋದಿ ಅವರನ್ನು ದೇಶದ ಜನತೆ ತಮ್ಮ ಮನೆಯವರಲ್ಲಿ ಒಬ್ಬನೆಂದು ಭಾವಿಸಿದ್ದಾರೆ.ದೇಶದ ರಾಜಕೀಯ ಇತಿಹಾಸದಲ್ಲಿ ಈ ಪರಿಯ ಪ್ರೀತಿ, ಗೌರವಕ್ಕೆ ಪಾತ್ರರಾದ ವ್ಯಕ್ತಿತ್ವ ಮತ್ತೊಂದಿಲ್ಲ.ಇಂದು ದೇವನಹಳ್ಳಿಯಲ್ಲಿ ಜರುಗಲಿದ್ದ ಪಕ್ಷದ ರೋಡ್ ಶೋಗೂ ಮುನ್ನ, ಮಳೆ ಬಂದಾಗ ಕಂಡ ಅಪೂರ್ವ ದೃಶ್ಯ.”ಎಂದು ಬಿಜೆಪಿ ಹೇಳಿಕೊಂಡಿದೆ.

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next