Advertisement

ಅಗತ್ಯ ಔಷಧಿ ಮನೆಗೆ ತಲುಪಿಸಿದ ಯುವಪಡೆ

06:19 PM Apr 11, 2020 | Naveen |

ದೇವರಹಿಪ್ಪರಗಿ: ಹುಣಶ್ಯಾಳ ಗ್ರಾಮದಲ್ಲಿ ಹಿರಿಯರು, ಮಕ್ಕಳಿಗೆ ಅಗತ್ಯಔಷಧಗಳನ್ನು ದೇವರಹಿಪ್ಪರಗಿ ಬಿಜೆಪಿ ಮಂಡಲ ಅಧ್ಯಕ್ಷ ಭೀಮನಗೌಡ ಸಿದರಡ್ಡಿ ಹಾಗೂ ಯುವಮೋರ್ಚಾ ಅಧ್ಯಕ್ಷ ರಮೇಶ ಮಸಬಿನಾಳ ವಿತರಿಸಿದರು.

Advertisement

ಈ ಸಂದರ್ಭದಲ್ಲಿ ಭೀಮನಗೌಡ ಸಿದರಡ್ಡಿ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಔಷಧಿಗಳನ್ನು ಉಚಿತವಾಗಿ ಒದಗಿಸುವ ಅಭಿಯಾನವನ್ನು ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ.ರಾಘವೇಂದ್ರ ಅವರ ನೇತೃತ್ವದಲ್ಲಿ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನದ ಅಂಗವಾಗಿ ಗ್ರಾಮೀಣ ಪ್ರದೇಶದ ಜನರು, ಬಡವರು ನಮಗೆ ತಿಳಿಸಿದ ಔಷಧಿಗಳನ್ನು ಉಚಿತವಾಗಿ ಅವರ ಮನೆಗೆ ತಲುಪಿಸಲಾಗುತ್ತಿದೆ ಎಂದರು.

9740207097 /8970118888 ಸಂಖ್ಯೆಗೆ ಸಂಪರ್ಕಿಸಿ ಸಾಮಾನ್ಯ ಕಾಯಿಲೆಗಳಿಗೆ ಅಗತ್ಯ ಔಷಧಿ ಪಡೆಯಬಹುದಾಗಿದೆ ಎಂದು ಮಾಹಿತಿ ನೀಡಿದರು. ಬಿಜೆಪಿ ಧುರೀಣರಾದ ಸಿದ್ದು ಬುಳ್ಳಾ, ಪ್ರಕಾಶ ಯರನಾಳ ಸಹಿತ ಪದಾಧಿಕಾರಿಗಳು, ಗ್ರಾಮಸ್ಥರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next