Advertisement
ಚೀನಾ ಮತ್ತು ಭಾರತ ನಡುವಿನ ಡೋಕ್ ಲಾ ಗಡಿ ವಿವಾದ ಉದ್ವಿಗ್ನಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಸಲಹೆ ಅಗತ್ಯ ಎಂದು ಪ್ರಧಾನಿ ಮೋದಿ ಅವರು ಹೇಳಿದ್ದು, ತಾವು ಸಂಜೆ ದೆಹಲಿಯಲ್ಲಿ ನಡೆಯಲಿರುವ ಸಭೆಗೆ ಹಾಜರಾಗಬೇಕೆಂದು ಸುಷ್ಮಾ ಸ್ವರಾಜ್ ಅವರು ಮಾತುಕತೆ ವೇಳೆ ತಿಳಿಸಿರುವುದಾಗಿ ವರದಿ ವಿವರಿಸಿದೆ.
ದೆಹಲಿಯ ಜವಾಹರ ಭವನದಲ್ಲಿ ಸಂಜೆ 5.30ಕ್ಕೆ ಸಭೆ ನಡೆಯಲಿದ್ದು, ದೇವೇಗೌಡರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ವರದಿ ತಿಳಿಸಿದೆ.