Advertisement

ಪ್ರಧಾನಿ ನರೇಂದ್ರ ಮೋದಿ ಬುಲಾವ್, ದೆಹಲಿಗೆ ದೌಡಾಯಿಸಿದ ದೇವೇಗೌಡ

01:30 PM Jul 15, 2017 | Sharanya Alva |

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೂಚನೆ ಮೇರೆಗೆ ವಿದೇಶಾಂಗ ವ್ಯವಹಾರ ಸಚಿವೆ ಸುಷ್ಮಾ ಸ್ವರಾಜ್ ಅವರು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರಿಗೆ ಶನಿವಾರ ದೂರವಾಣಿ ಕರೆ ಮಾಡಿ ದೆಹಲಿಗೆ ಬರುವಂತೆ ಆಹ್ವಾನ ನೀಡಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.

Advertisement

ಚೀನಾ ಮತ್ತು ಭಾರತ ನಡುವಿನ ಡೋಕ್ ಲಾ ಗಡಿ ವಿವಾದ ಉದ್ವಿಗ್ನಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಸಲಹೆ ಅಗತ್ಯ ಎಂದು ಪ್ರಧಾನಿ ಮೋದಿ ಅವರು ಹೇಳಿದ್ದು, ತಾವು ಸಂಜೆ ದೆಹಲಿಯಲ್ಲಿ ನಡೆಯಲಿರುವ ಸಭೆಗೆ ಹಾಜರಾಗಬೇಕೆಂದು ಸುಷ್ಮಾ ಸ್ವರಾಜ್ ಅವರು ಮಾತುಕತೆ ವೇಳೆ ತಿಳಿಸಿರುವುದಾಗಿ ವರದಿ ವಿವರಿಸಿದೆ.

ದೂರವಾಣಿಯಲ್ಲಿ ಕನ್ನಡದಲ್ಲೇ ಮಾತನಾಡಿದ ಸುಷ್ಮಾ ಸ್ವರಾಜ್ ಅವರು, ದೇವೇಗೌಡರ ಆರೋಗ್ಯ ವಿಚಾರಿಸಿದರು. 
ದೆಹಲಿಯ ಜವಾಹರ ಭವನದಲ್ಲಿ ಸಂಜೆ 5.30ಕ್ಕೆ ಸಭೆ ನಡೆಯಲಿದ್ದು, ದೇವೇಗೌಡರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next