Advertisement

ಲೋಕಸಭಾ ಚುನಾವಣೆಗೆ ದೇವೇಗೌಡರು ಸ್ಪರ್ಧಿಸಲಿ

12:30 AM Feb 01, 2019 | Team Udayavani |

ಬೇಲೂರು: ಹಾಸನ ಲೋಕಸಭಾ ಕ್ಷೇತ್ರದಿಂದ ಮಾಜಿ ಪ್ರಧಾನಿ ದೇವೇಗೌಡರೇ ಸ್ಪರ್ಧಿಸುವುದು ಸೂಕ್ತ ಎಂದು ಜಿಪಂ ಸದಸ್ಯೆ ಭವಾನಿ ರೇವಣ್ಣ ಹೇಳಿದರು. 

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಸನ್ನಿವೇಶದಲ್ಲಿ ಹಾಸನದಿಂದ ದೇವೇಗೌಡರು ಸ್ಪರ್ಧಿಸಬೇಕೆಂಬ ಚರ್ಚೆ ನಡೆದಿದ್ದು, ಗೌಡರ ಮನಸ್ಸಿನಲ್ಲಿ ಏನಿದೆ ಎಂಬುದನ್ನು ನಾವು ತಿಳಿದಿಲ್ಲ. ಜೆಡಿಎಸ್‌ ಯುವ ಮುಖಂಡ ಪ್ರಜ್ವಲ್‌ ರೇವಣ್ಣ ಸ್ಪರ್ಧಿಸಿದರೆ ನಮ್ಮ ಮೇಲೆ ಹೆಚ್ಚಿನ ಜವಾಬ್ದಾರಿ ವಹಿಸಬೇಕಾಗುತ್ತದೆ ಎಂದು ತಿಳಿಸಿದರು.

ಸಂಸದರ ನಿಧಿಯಿಂದ ಹೆಚ್ಚಿನ ಅನುದಾನವನ್ನು ಬೇಲೂರು ತಾಲೂಕಿನ ಅಭಿವೃದಿಟಛಿಗೆ ನೀಡಿದ್ದು ಕಳೆದ 10 ವರ್ಷಗಳಿಂದ ಪಕ್ಷದ ಶಾಸಕರು ಇಲ್ಲದಿದ್ದರೂ ಪ್ರಜ್ವಲ್‌ ರೇವಣ್ಣ ಮತ್ತು ತಾವು ಜನರ ಸಮಸ್ಯೆಗಳನ್ನು ಆಲಿಸಿ ಸೂಕ್ತ ಪರಿಹಾರ ದೊರಕಿಸಿದ್ದೇವೆಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next