Advertisement

ದೇವೇಗೌಡರು ಅಧಿಕಾರಕ್ಕಾಗಿ ಯಾವ ಪಕ್ಷಕ್ಕಾದರೂ ಹೋಗ್ತಾರೆ

11:28 PM Dec 25, 2019 | Lakshmi GovindaRaj |

ಬೆಂಗಳೂರು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಚಾಣಾಕ್ಷ ರಾಜಕಾರಣಿ. ಅವರು ಅಧಿಕಾರಕ್ಕಾಗಿ ಯಾವುದೇ ಪಕ್ಷಕ್ಕೆ ಹೋಗಲು ಸಿದ್ಧ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ, ವಿಧಾನ ಪರಿಷತ್‌ ಸದಸ್ಯ ಎನ್‌.ರವಿಕುಮಾರ್‌ ಹೇಳಿದರು.

Advertisement

ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಅವರ ಕೃತಿಯಲ್ಲಿನ ಉಲ್ಲೇಖದ ಬಗ್ಗೆ ಬುಧವಾರ ಪ್ರತಿಕ್ರಿಯಿಸಿದ ಅವರು, ದೇವೇಗೌಡರು ಅಧಿಕಾರಕ್ಕಾಗಿ ಯಾವುದೇ ಹಾದಿಯಿದ್ದರೂ ಅದನ್ನು ಬಳಸಿಕೊಂಡು ಕಾಂಗ್ರೆಸ್‌, ಬಿಜೆಪಿ, ಕಮ್ಯುನಿಸ್ಟ್‌ ಪಕ್ಷ ಸೇರಿದಂತೆ ಯಾವುದೇ ಪಕ್ಷಕ್ಕಾದರೂ ಹೋಗುತ್ತಾರೆ. ಅವರಿಗೆ ಅಧಿಕಾರ ಮುಖ್ಯ ಎಂದು ದೂರಿದರು.

ಮುಖ್ಯಮಂತ್ರಿ ಬಿ.ಎಸ್‌. ಯಡಿ ಯೂರಪ್ಪ ಅವರು ಈ ಹಿಂದೆ ತಮ್ಮ ಮನೆ ಬಾಗಿಲಿಗೆ ಬಂದಿದ್ದರು ಎಂಬುದಾಗಿ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ರವಿಕುಮಾರ್‌, ಯಡಿಯೂರಪ್ಪ ಅವರು ಸಮ್ಮಿಶ್ರ ಸರ್ಕಾರದ ಅವಧಿ ಯಲ್ಲಿ ಹೋಗಿರಬಹುದು. ಅದರಲ್ಲಿ ಆಶ್ಚರ್ಯವೇನೂ ಇಲ್ಲ.

ಯಡಿಯೂರಪ್ಪ ಅವರಿಗೆ ಕುಮಾರಸ್ವಾಮಿಯವರ ಮನೆ ದಾರಿ ಗೊತ್ತು, ಕುಮಾರಸ್ವಾಮಿಯವರಿಗೆ ಯಡಿಯೂರಪ್ಪ ಅವರ ಮನೆ ದಾರಿಯೂ ಗೊತ್ತು. ಆದರೆ, ಕುಮಾರಸ್ವಾಮಿ ಎಂತಹ ಮುಖ್ಯಮಂತ್ರಿ ಯಾಗಿದ್ದರು ಎಂಬುದು ಗೊತ್ತಿದೆ. ತಾಜ್‌ ವೆಸ್ಟ್‌ಎಂಡ್‌ನ‌ಲ್ಲಿ ಮನೆ ಮಾಡಿ ಅಧಿಕಾರ ಮಾಡಿದ ಮುಖ್ಯಮಂತ್ರಿ ಅವರಾಗಿದ್ದರು ಎಂದು ಕುಟುಕಿದರು.

Advertisement

Udayavani is now on Telegram. Click here to join our channel and stay updated with the latest news.

Next