Advertisement

ದೇವೇಗೌಡರು ದೊಡ್ಡವರು: ಅವರ ಹೇಳಿಕೆಗೆ ಪ್ರತಿಕ್ರಿಯೆ ಕೊಡಲ್ಲ

10:06 AM Nov 04, 2019 | sudhir |

ಚಿಕ್ಕಬಳ್ಳಾಪುರ: ಮಾಜಿ ಪ್ರಧಾನಿ ದೇವೇಗೌಡರು ದೊಡ್ಡವರು, ಅವರ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ಕೊಡಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

Advertisement

ಕೆಟ್ಟ ನಡವಳಿಕೆಗಳಿಂದ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದಿದೆ ಎಂದು ಮಾಜಿ ಪ್ರದಾನಿ ದೇವೇಗೌಡರ ಹೇಳಿಕೆ ಕುರಿತು ಸಿಎಂ ಗಮನ ಸೆಳೆದಾಗ, ಮುಖ್ಯಮಂತ್ರಿ ಯಡಿಯೂರಪ್ಪ ಯಾವುದೇ ಪ್ರತಿಕ್ರಿಯೆ ಕೊಡದೇ ನುಣಚಿಕೊಂಡರು.

ಮೌನವಾಗಿದ್ದ ಯಡಿಯೂರಪ್ಪ

ಅತ್ತ ಬಿಜೆಪಿ ಸರ್ಕಾರಕ್ಕೆ ನೂರು ದಿನದ ಸಂಭ್ರಮ ಇದ್ದೂರು ಮುಖ್ಯಮಂತ್ರಿ ಯಡಿಯೂರಪ್ಪ ಮಾತ್ರ ಚಿಕ್ಕಬಳ್ಳಾಪುರ ಜೂನಿಯರ್ ಕಾಲೇಜ್ ಆವರಣದಲ್ಲಿ ಆಯೋಜಿಸಿದ್ದ ಶಿವ ಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಯಾರೊಂದಿಗೂ ಹೆಚ್ಚು ಮಾತನಾಡದೇ ಮೌನ ವಹಿಸಿದ್ದರು.

Advertisement

ಭೋವಿ ಗುರುಪೀಠಕ್ಕೆ 5 ಕೋಟಿ

ರಾಜ್ಯದ ಭೋವಿ ಗುರುಪೀಠದ ಸಮಗ್ರ ಅಭಿವೃದ್ಧಿಗೆ ತತ್ ಕ್ಷಣವೇ 5 ಕೋಟಿ ರೂ ಅನುದಾನ ಬಿಡುಗಡೆ ಮಾಡುವುದಾಗಿ ತಿಳಿಸಿದರು. ನಾನೂ ನಾಲ್ಕು ಬಾರಿ ಮುಖ್ಯಮಂತ್ರಿ ಆಗಲು ಭೋವಿ ಸಮಾಜವೇ ಕಾರಣ ಇಡೀ ಭೋವಿ ಸಮಾಜ ಕಲ್ಲು ಬಂಡೆಯಂತೆ ಪಕ್ಷದ ಪರ ನಿಂತಿದೆ ಎಂದರು. ಮುಂದಿನ ವರ್ಷದಲ್ಲಿ ಭೋವಿ ಅಭಿವೃದ್ಧಿ ನಿಗಮಕ್ಕೆ ಹೆಚ್ಚಿನ ಅನುದಾನ ನೀಡುವುದಾಗಿ ಸಿಎಂ ಭರವಸೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next