Advertisement

H. D. Deve Gowda ಅಳಿಯ ಸಹಿತ ನಾಲ್ವರಿಗೂ ಸೋಲು : ಡಿಕೆಶಿ

11:45 PM Apr 01, 2024 | Team Udayavani |

ಹಾಸನ: ಜೆಡಿಎಸ್‌ನಿಂದ ಮೂವರು, ಬಿಜೆಪಿಯಿಂದ ದೇವೇಗೌಡರ ಆಳಿಯ ಚುನಾವಣೆ ಕಣದಲ್ಲಿದ್ದು, ಇವರೆಲ್ಲರೂ ಗೆಲ್ಲಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಭವಿಷ್ಯ ನುಡಿದರು.

Advertisement

ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್‌ ಪಟೇಲ್‌ ಅವರ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ನಡೆದ ರೋಡ್‌ ಶೋ ನಡೆಸಿ ಮಾತನಾಡಿದ ಅವರು, ಇಡೀ ದೇಶ ಹಾಸನ, ಮಂಡ್ಯ, ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳ ಚುನಾವಣೆ ನೋಡುತ್ತಿದೆ. ನಮಗೆ ರಾಜಕೀಯ ಹೊಸದೇನಲ್ಲ. ಅವರ ಪಕ್ಷ, ಅಳಿಯ ಶಕ್ತಿಶಾಲಿ ಆಗಿದ್ದರೆ ಅವರ ಪಕ್ಷದಿಂದ ನಿಲ್ಲಿಸುತ್ತಿದ್ದರು. ಜೆಡಿಎಸ್‌ ಶಕ್ತಿ ಕಳೆದುಕೊಂಡಿದೆ ಎಂದರು.

ಕುಮಾರಸ್ವಾಮಿ ಸರಕಾರವನ್ನು ಯಾರು ಬೀಳಿಸಿದರೋ ಅವರ ಜತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ.

ಯಡಿಯೂರಪ್ಪನವರನ್ನು ಜೈಲಿಗೆ ಯಾರು ಕಳಿಸಿದರೋ ಅವರ ಜತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ನಾವು ಕುಮಾರಸ್ವಾಮಿಗೆ ದ್ರೋಹ ಮಾಡಿಲ್ಲ. ದ್ರೋಹ ಮಾಡಿದ್ದರೆ ಕುಮಾರಸ್ವಾಮಿ ಹಾಸನಾಂಬೆ ಸನ್ನಿಧಿಯಲ್ಲಿ ಪ್ರಮಾಣ ಮಾಡಲಿ ಎಂದು ಸವಾಲು ಹಾಕಿದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next