Advertisement

Assembly Electionನಲ್ಲಿ ಮೈತ್ರಿಗೆ ದೇವೇಗೌಡರು ಒಪ್ಪಲಿಲ್ಲ: ಅಶೋಕ್‌

10:14 PM Jul 07, 2024 | Team Udayavani |

ನೆಲಮಂಗಲ(ಬೆಂ.ಗ್ರಾಮಾಂತರ): ಲೋಕಸಭೆ ಚುನಾವಣೆಯಲ್ಲಿ ನಡೆದ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಸೂತ್ರ ವಿಧಾನಸಭಾ ಚುನಾವಣೆಗೆ ನಡೆದಿದ್ದರೆ ಕಾಂಗ್ರೆಸ್‌ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತಿರಲಿಲ್ಲ. ಆದರೆ, ಅಂದು ದೇವೇಗೌಡರು ಮೈತ್ರಿಗೆ ಒಪ್ಪಿರಲಿಲ್ಲ ಎಂದು ವಿಧಾನಸಭಾ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಹೇಳಿದರು.

Advertisement

ತಾಲೂಕಿನ ಬಾವಿಕೆರೆ ಗ್ರಾಮದ ಬಳಿಯ ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷದಿಂದ ಆಯೋಜನೆ ಮಾಡಲಾಗಿದ್ದ ಚಿಕ್ಕಬಳ್ಳಾಪುರ ಕ್ಷೇತ್ರದ ಸಂಸದ ಡಾ.ಕೆ.ಸುಧಾಕರ್‌ಗೆ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿ, ರಾಜ್ಯ ಸರ್ಕಾರ ಗ್ಯಾರಂಟಿಗಳಿಗಾಗಿ ಹಾಲು, ಮದ್ಯ, ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಮಾಡಿ ಜನರಿಗೆ ಸಂಕಷ್ಟವನ್ನು ತಂದಿಟ್ಟಿದೆ. ಸರ್ಕಾರ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಅನುದಾನ ನೀಡುತ್ತಿಲ್ಲ. 900 ಕೋಟಿ ರೂ. ಹಾಲಿನ ಪ್ರೋತ್ಸಾಹ ಧನ ರೈತರಿಗೆ ನೀಡಿಲ್ಲ ಎಂದು ಆರೋಪಿಸಿದರು.

ಸಂಸದ ಡಾ.ಕೆ.ಸುಧಾಕರ್‌ ಮಾತನಾಡಿ, ರಾಜ್ಯ ಕಾಂಗ್ರೆಸ್‌ ಸರ್ಕಾರ ಜನರ ಜೀವನ ಜತೆ ಆಟವಾಡುತ್ತಿದೆ. ದೇಶದಲ್ಲಿ ಪುಷ್ಪ ಮಂಡಳಿ ಇಲ್ಲ. ಮನವಿ ಮಾಡಿದ್ದು ರಾಜ್ಯದಲ್ಲಿ ಆರಂಭವಾಗಲಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next