Advertisement

ಸಿಎಂ ಯಡಿಯೂರಪ್ಪ ವಿರುದ್ದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಆಕ್ರೋಶ

05:03 PM Sep 22, 2019 | Suhan S |

ಬೆಂಗಳೂರು : ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿಯಿಂದ ಜನ ಸಂಕಷ್ಟದಲ್ಲಿದ್ದಾರೆ. ಆದರೆ ರಾಜ್ಯ ಸರ್ಕಾರ ಇದರ ಬಗ್ಗೆ ತಕರಾರು ಎತ್ತುತ್ತಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದರು.

Advertisement

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು ರಾಜ್ಯದಲ್ಲಿ ‌ಪ್ರವಾಹ ಪರಿಸ್ಥಿತಿಯಿಂದ ಜನ ತತ್ತರಿಸಿದ್ದಾರೆ. ಈ ವೇಳೆಯಲ್ಲಿ ಸಿಎಂ  ಯಡಿಯೂರಪ್ಪರವರು ದೆಹಲಿಗೆ ಹೋಗಿರುವುದು ಪ್ರವಾಹ ಪರಿಹಾರ ಕೇಳುವುದಕ್ಕಲ್ಲ, ಬದಲಾಗಿ ಅನರ್ಹತೆಗೊಂಡಿರುವ ಶಾಸಕರ‌ ಪರ ವಕಾಲತ್ತು‌ ವಹಿಸಿ ಸರ್ಕಾರ ಉಳಿಸಿಕೊಳ್ಳಲು ಕಸರತ್ತು ‌ಮಾಡಲು ಎಂದು ಹೇಳಿದರು.

ಅಧಿಕಾರ ಉಳಿಸಿಕೊಳ್ಳಲು ಯಡಿಯೂರಪ್ಪ ದೆಹಲಿಗೆ ಹೋಗಿದ್ದಾರೆ. ಅವರಿಗೆ ರಾಜ್ಯದ ಜನರ ಸಂಕಷ್ಟ ಬೇಕಾಗಿಲ್ಲ. ಸರ್ಕಾರ ಉಳಿಸಿಕೊಳ್ಳಲು ಏನು ಬೇಕಾದರೂ ಮಾಡಲು ಸಿದ್ದವಾಗಿದ್ದಾರೆ‌ ಎಂದು‌ ಟೀಕೆ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next