Advertisement

ನರೇಗಾದಿಂದ ಗ್ರಾಮೀಣ ಪ್ರದೇಶದಲ್ಲಿ ಅಭಿವೃದ್ಧಿ

01:15 PM Jan 08, 2020 | Suhan S |

ಶಿಡ್ಲಘಟ್ಟ: ಉದ್ಯೋಗ ಖಾತ್ರಿ ಯೋಜನೆಯಿಂದ ಗ್ರಾಮೀಣ ಪ್ರದೇಶದ ಸ್ವರೂಪವೇ ಬದಲಾಗಿದ್ದು, ನಗರ ಪ್ರದೇಶದ ಮಾದರಿಯಲ್ಲಿ ಗ್ರಾಮಾಂತರ ಪ್ರದೇಶದಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿಗಳು ನಡೆದಿವೆ ಎಂದು ಶಾಸಕ ವಿ.ಮುನಿಯಪ್ಪ ಹೇಳಿದರು.

Advertisement

ತಾಲೂಕಿನ ಅಬ್ಲೂಡು ಗ್ರಾಮ ಪಂಚಾಯಿತಿಯ ಚೀಮನಹಳ್ಳಿ ಗ್ರಾಮದಲ್ಲಿ ನರೇಗಾ ಯೋಜನೆಯಡಿ 13 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಿರುವ ಗೋಕುಂಟೆ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಅಭಿವೃದ್ಧಿ ಮತ್ತು ನೈರ್ಮಲ್ಯ ಕಾಪಾಡಲು ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ಜಾರಿಗೊಳಿಸಿದ ನರೇಗಾ ಯೋಜನೆಯಿಂದ ಕ್ರಾಂತಿಕಾರಿ ಬದಲಾವಣೆಯಾಗಿದ್ದು, ಪ್ರತಿಯೊಂದು ಗ್ರಾಪಂ ವ್ಯಾಪ್ತಿಯಲ್ಲಿ ಕೋಟ್ಯಂತರ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ನಡೆದಿದೆ ಎಂದರು. ನರೇಗಾ ಯೋಜನೆಯಡಿ ನಡೆದಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಲು ಶಾಸಕರ ನೇತೃತ್ವದಲ್ಲಿ ಒಂದು ಸಮಿತಿ ರಚಿಸಲಾಗಿದ್ದು, ಯಾವ ಯಾವ ಗ್ರಾಪಂಗಳಲ್ಲಿ ನರೇಗಾ ಯೋಜನೆಯಡಿ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗಿದೆ ಅದು ಗುಣಮಟ್ಟವಾಗಿದೆಯೇ? ಎಂಬುದನ್ನು ಪರಿಶೀಲಿಸುವ ಹಕ್ಕು ಶಾಸಕರಿಗೆ ನೀಡಲಾಗಿದೆ ಎಂದರು. ಅಬ್ಲೂಡು ಗ್ರಾಪಂನ ಚೀಮನಹಳ್ಳಿ ಗ್ರಾಮದಲ್ಲಿ ಈಗಾಗಲೇ ಅನೇಕ ಅಭಿವೃದ್ಧಿ ಕಾಮಗಾರಿ ನಡೆಸಲಾಗಿದೆ. ಬಡವರಿಗೆ ಉಚಿತ ನಿವೇಶನಗಳ ಮಂಜೂರಾತಿ ಸಹಿತ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ತಮ್ಮ ಅಧಿಕಾರಾವಧಿಯಲ್ಲಿ ನಡೆಸಲಾಗಿದೆ ಎಂದರು.

ನರೇಗಾ ಕಾಮಗಾರಿ, ಶಾಸಕರ ಶ್ಲಾಘನೆ: ನರೇಗಾ ಯೋಜನೆಯನ್ನು ಸದುಪಯೋಗ ಮಾಡಿಕೊಂಡು ಅನೇಕ ಗ್ರಾಪಂ ವ್ಯಾಪ್ತಿಯಲ್ಲಿ ಜಲ-ಪರಿಸರ ಸಂರಕ್ಷಣೆ ಸಹಿತ ಅನೇಕಅಭಿವೃದ್ಧಿ ಕಾಮಗಾರಿಗಳು ನಡೆದಿವೆ. ಅಬ್ಲೂಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಂರ್ತಜಲ ಮಟ್ಟ ಸಂರಕ್ಷಣೆಗೆ ಗೋಕುಂಟೆಯನ್ನು ಮಾದರಿಯಾಗಿ ನಿರ್ಮಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಶಾಸಕರು, ತಾಪಂ ಇಒ, ಪಿಡಿಒ, ಮತ್ತು ಸಿಬ್ಬಂದಿಗೆ ಅಭಿನಂದಿಸಿದರು.

ತಾಪಂ ಇಒ ಶಿವಕುಮಾರ್‌, ಅಬ್ಲೂಡು ಗ್ರಾಪಂ ಸದಸ್ಯ ಜೆ.ಸಿ.ಬಿ.ಮಂಜುನಾಥ್‌, ಪಿಡಿಒ ಅಂಜನ್‌ಕುಮಾರ್‌, ಕಾರ್ಯದರ್ಶಿ ಮದ್ದರೆಡ್ಡಿ, ಗ್ರಾಪಂ ಸದಸ್ಯೆ ಜ್ಯೋತಿ ಗಂಗಾಧರ್‌, ಶಾಸಕರ ಆಪ್ತ ಕಾರ್ಯದರ್ಶಿ ಗುಡಿಹಳ್ಳಿ ಚಂದ್ರು, ಮುನಿರಾಜು, ಹೆಚ್‌.ಬಸವರಾಜು, ಬಸವರಾಜು, ರಾಮಣ್ಣ, ಆರ್‌ಟಿಐ ಕಾರ್ಯಕರ್ತ ಮುನಿರಾಜು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next