Advertisement

ಅಭಿವೃದ್ಧಿಯೇ ಬಿಜೆಪಿ ಮೂಲಮಂತ್ರ: ಶಾಸಕ ಮುರುಗೇಶ

11:36 AM Apr 09, 2019 | Team Udayavani |
ಬೀಳಗಿ: ಬಡವರ, ಜನಸಾಮಾನ್ಯರ ಪಕ್ಷವೆಂದರೆ ಅದು ಬಿಜೆಪಿ. ಬಿಜೆಪಿಯಿಂದ ಮಾತ್ರ ದೇಶದ ಸಮಗ್ರತೆ ಸಾಧ್ಯ. ಅಭಿವೃದ್ಧಿಯೇ ಬಿಜೆಪಿಯ ಮೂಲಮಂತ್ರವಾಗಿದೆ ಎಂದು ಶಾಸಕ ಮುರುಗೇಶ ನಿರಾಣಿ ಹೇಳಿದರು.
ಹೊನರಳ್ಳಿ ಗ್ರಾಮದಲ್ಲಿ ಸೋಮವಾರ ಬಾಗಲಕೋಟೆ ಲೋಕಸಭೆ ಬಿಜೆಪಿ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಸುಭದ್ರ ದೇಶ ಕಟ್ಟುವಲ್ಲಿ ಬಿಜೆಪಿ ಕೈಗೊಂಡ ಕಠಿಣ ನಿಲುವು ಹಿಂದೆ ಯಾವುದೇ ಪಕ್ಷಗಳು ತೆಗೆದುಕೊಂಡಿಲ್ಲ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತ ಹೆಮ್ಮೆಯಿಂದ ಬೀಗುವಂತಾಗಿದೆ. ದೇಶದ ಭದ್ರತೆಯನ್ನು ಹೆಚ್ಚಿಸಲು ಸೈನಿಕರಿಗೆ ಹೆಚ್ಚಿನ ಬಲ ನೀಡಿರುವುದು ಮೋದಿ ಸರಕಾರದ ಮಹೋನ್ನತ ಸಾಧನೆಯಾಗಿದೆ ಎಂದರು.
ಬಾಗಲಕೋಟೆ ಲೋಕಸಭೆ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ ಮೂರು ಬಾರಿ ಸಂಸದರಾಗಿ ಕ್ಷೇತ್ರಕ್ಕೆ ಉತ್ತಮ ಕೆಲಸ ಮಾಡಿದ್ದಾರೆ. ಒಂದೇ ಒಂದು ಕಪ್ಪುಚುಕ್ಕೆಯಿಲ್ಲದ, ಸರಳ-ಸಜ್ಜನಿಕೆಯ ವ್ಯಕ್ತಿಯಾಗಿದ್ದಾರೆ. ನಾಲ್ಕನೇ ಬಾರಿಗೆ ಗದ್ದಿಗೌಡರ ಅವರನ್ನು ಲೋಕಸಭೆಗೆ ಕಳುಹಿಸುವ ಮೂಲಕ ಮೋದಿ ಪ್ರಧಾನಿಯಾಗಲು ಶಕ್ತಿ ನೀಡಬೇಕೆಂದು ಮನವಿ ಮಾಡಿದರು. ಹೂವಪ್ಪ ರಾಠೊಡ, ಶ್ರೀಶೈಲ ಗೌರಿ, ರಮೇಶ ಮೋರಟಗಿ, ಮಲ್ಲಿಕಾರ್ಜುನ ಗೌಡರ, ಹಿರೇಮಠ ಕಾರ್ಯಕರ್ತರು ಇದ್ದರು.
Advertisement

Udayavani is now on Telegram. Click here to join our channel and stay updated with the latest news.

Next