Advertisement

ಅಭಿವೃದ್ಧಿ ನಮ್ಮ ಸಂಕಲ್ಪ ಪ್ರಣಾಳಿಕೆ

03:58 PM May 25, 2019 | Team Udayavani |

ಸಿದ್ದಾಪುರ: ಲೋಕಸಭಾ ಚುನಾವಣೆ ಫಲಿತಾಂಶದಿಂದ ನಮ್ಮ ಜವಾಬ್ದಾರಿ ಹೆಚ್ಚಿದೆ. ಸ್ಥಳೀಯ ಪಪಂದಲ್ಲಿ 15 ಸ್ಥಾನಗಳನ್ನು ಗೆದ್ದು ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದು ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ವಿಶ್ವಾಸ ವ್ಯಕ್ತಪಡಿಸಿದರು.

Advertisement

ಅವರು ಪ.ಪಂ ಚುನಾವಣೆ ಪಟ್ಟಣದ ಅಭಿವೃದ್ಧಿ ನಮ್ಮ ಸಂಕಲ್ಪ ಎಂಬ ಚುನಾವಣಾ ಪ್ರಣಾಳಿಕೆ ಬಿಡುಗಡೆಗೊಳಿಸಿ ಮಾತನಾಡಿದರು.

ಪಟ್ಟಣದ ಅಭಿವೃದ್ಧಿಗೆ ಸಂಕಲ್ಪ ಮಾಡಿ ಅಭ್ಯರ್ಥಿಗಳು ಕಾರ್ಯಕರ್ತರು ಮನೆಮನೆ ಬಾಗಿಲಿಗೆ ಹೋಗಿ ಪ್ರಚಾರ ನಡೆಸುತ್ತಿದ್ದಾರೆ. ಕೇಂದ್ರದಲ್ಲಿ ನಮ್ಮದೇ ಸರಕಾರವಿದೆ. ರಾಜ್ಯದಲ್ಲೂ ನಮ್ಮದೇ ಸರಕಾರ ಬರುವ ನಿರೀಕ್ಷೆ ಇದೆ. ಹೀಗಾಗಿ ಸ್ಥಳೀಯವಾಗಿಯೂ ನಮ್ಮದೇ ಆಡಳಿತವಾದರೆ ಜನರಿಗೆ ಹಾಗೂ ಅಭಿವೃದ್ಧಿ ದೃಷ್ಟಿಯಿಂದ ಅನುಕೂಲವಾಗಲಿದೆ. ಹಾಗಾಗಿ 15 ಸ್ಥಾನಗಳಲ್ಲಿ 14ರಲ್ಲಿ ಬಿಜೆಪಿ ಚಿನ್ನೆ ಮೇಲೆ ಅಭ್ಯರ್ಥಿಗಳು ಸ್ಪರ್ಧೆ ನಡೆಸಿದ್ದಾರೆ ಒಂದು ಸ್ಥಾನಕ್ಕೆ ನಾವು ಬೆಂಬಲ ಸೂಚಿಸಿದ್ದೇವೆ. ಹೀಗಾಗಿ 15 ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ಹೊಂದಿದ್ದೇವೆ ಎಂದರು.

ಜಿಲ್ಲಾಧ್ಯಕ್ಷ ಕೆ.ಜಿ. ನಾಯ್ಕ ಮಾತನಾಡಿ ನಮ್ಮ ಅವಧಿಯಲ್ಲಿ ಪಟ್ಟಣದಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದೆ. ಇನ್ನೂ ಶಾಶ್ವತ ನೀರಿನ ಸೌಲಭ್ಯ, ಸ್ವಚ್ಛತೆ, ಅತಿಕ್ರಮಣ ಸಮಸ್ಯೆಗಳು ಸೇರಿದಂತೆ ಹಲವಾರು ಸಮಸ್ಯೆಗಳಿವೆ. ಇವುಗಳ ನಿವಾರಣೆಗೆ ಬಿಜೆಪಿಗೆ ಬೆಂಬಲಿಸಬೇಕು ಎಂದರು.

ಬಿಜೆಪಿ ಜಿಲ್ಲಾ ಮಾಧ್ಯಮ ಪ್ರಮುಖ ರವಿ ಹೆಗಡೆ ಹೂವಿನಮನೆ ಮಾತನಾಡಿ, ಇಲ್ಲಿ ಬಿಜೆಪಿ ಆಡಳಿತ ಅವಶ್ಯವಿದೆ. ಅನುಭವ-ಹಿರಿತನ ಹಾಗೂ ಹೊಸಬರಿಗೆ ಟಿಕೇಟ್ ನೀಡಿರುವುದರಿಂದ ಜನರಿಗೆ ಬಿಜೆಪಿ ಆಡಳಿತದ ಬಗ್ಗೆ ಒಲವಿದೆ. ರಾಜ್ಯದಲ್ಲಿ ನಮ್ಮದೆ ಸರಕಾರ ಬಂದ್ರೆ ಸ್ವಾತಂತ್ರ್ಯ ಹೋರಾಟಕ್ಕೆ ಕೊಡುಗೆ ನೀಡಿದ ಊರಾದ್ದರಿಂದ ವಿಶೇಷ ಅನುದಾನ ಕೇಳುತ್ತೇವೆ ಎಂದರು.

Advertisement

ತಾಲೂಕು ಅಧ್ಯಕ್ಷ ಎಂ.ವಿ. ಭಟ್ ಹಾಗೂ ಪ.ಪಂ ಅಭ್ಯರ್ಥಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next