Advertisement

Belagavi; ಗ್ರೀನ್ ಕಾರಿಡಾರ್ ಹೆದ್ದಾರಿ ಅಭಿವೃದ್ಧಿಯು ಕೇಂದ್ರದ ಆದ್ಯತೆ: ನಿತಿನ್ ಗಡ್ಕರಿ

04:18 PM Feb 22, 2024 | Team Udayavani |

ಬೆಳಗಾವಿ: ದೇಶದಾದ್ಯಂತ ಗ್ರೀನ್ ಕಾರಿಡಾರ್ ಹೆದ್ದಾರಿಗಳನ್ನು ಅಭಿವೃದ್ಧಿ ಪಡಿಸುವುದು ಕೇಂದ್ರ ಸರಕಾರದ ಆದ್ಯತೆಯಾಗಿದೆ ಎಂದು ಕೇಂದ್ರ ರಸ್ತೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದರು.

Advertisement

ಬೆಳಗಾವಿಯಲ್ಲಿ ಮಾತನಾಡಿದ ಅವರು, ದೇಶದ ಪ್ರಮುಖ ನಗರಗಳ ಮಧ್ಯೆ ಹೆದ್ದಾರಿ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಪ್ರಯಾಣದ ಅವಧಿಯನ್ನು ಕಡಿಮೆಗೊಳಿಸಿ ಸುಗಮ, ಸುರಕ್ಷಿತ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದರು.

ಬೆಳಗಾವಿ ಜಿಲ್ಲೆಯ 1622 ಕೋಟಿ ವೆಚ್ಚದ ಹೊನಗಾ-ಝಾಡಶಹಾಪುರ ಚತುಷ್ಪಥ ರಿಂಗ್ ರಸ್ತೆ, 941 ಕೋಟಿ ವೆಚ್ಚದ ಚಿಕ್ಕೋಡಿ ಬೈಪಾಸ್ ನಿಂದ-ಗೋಟೂರವರೆಗಿನ ಚತುಷ್ಪಥ ಹಾಗೂ ಶಿರಗುಪ್ಪಿಯಿಂದ ಅಂಕಲವರೆಗಿನ 887 ಕೋಟಿ ವೆಚ್ಚದ ರಸ್ತೆ ಅಗಲೀಕರಣ ಸೇರಿದಂತೆ ಒಟ್ಟಾರೆ 13 ಸಾವಿರ ಕೋಟಿ ಮೌಲ್ಯದ 680 ಕಿ.ಮೀ. ಉದ್ದದ 36 ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಸಚಿವರು ಗುರುವಾರ ಚಾಲನೆ ನೀಡಿದರು.

ಕಳೆದ ಅನೇಕ ವರ್ಷಗಳಿಂದ ಬೆಳಗಾವಿ ರಿಂಗ್ ರಸ್ತೆ ಸಮಸ್ಯೆ ಚರ್ಚೆಯಾಗಿತ್ತು. ದಿ.ಸುರೇಶ್ ಅಂಗಡಿ ಅವರು ಹಾಗೂ ಎಲ್ಲ ಶಾಸಕರು ಪ್ರಸ್ತಾಪಿಸಿದ್ದರು. ಇದೀಗ ಬೆಳಗಾವಿ ರಿಂಗ್ ರಸ್ತೆಗೆ ಕಾಲ ಕೂಡಿ ಬಂದಿದೆ. ರಾಜ್ಯದಲ್ಲಿ 8200 ಕಿ.ಮೀ ರಾಷ್ಟ್ರೀಯ ಹೆದ್ದಾರಿಯಿದೆ. ರಾಜ್ಯದಲ್ಲಿ 3 ಲಕ್ಷ ಕೋಟಿ ರೂಪಾಯಿ ವೆಚ್ಚದ ಕಾಮಗಾರಿ ಕೈಗೊಳ್ಳುವ ಗುರಿ ಇದ್ದು ಈಗ ಬಹುತೇಕ ಕಾಮಗಾರಿಗಳಿಗೆ ಚಾಲನೆ ದೊರೆತಿದೆ.

Advertisement

Udayavani is now on Telegram. Click here to join our channel and stay updated with the latest news.

Next