Advertisement

ಕೊತ್ತತ್ತಿ ಗ್ರಾಮದ ಅಭಿವೃದ್ಧಿಗೆ ಬದ್ಧ

01:59 PM Aug 25, 2020 | Suhan S |

ಶ್ರೀರಂಗಪಟ್ಟಣ: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊತ್ತತ್ತಿ ಗ್ರಾಮದ ಅಭಿವೃದ್ಧಿಗೆ ಬದ್ಧರಾಗಿದ್ದೇವೆ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ಹೇಳಿದರು.

Advertisement

ತಾಲೂಕಿನ ಕೊತ್ತತ್ತಿ ಗ್ರಾಮದಲ್ಲಿ ಪಶು ಆಸ್ಪತ್ರೆ ಕಟ್ಟಡದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಕೊತ್ತತ್ತಿ ಗ್ರಾಮದ ಒಳಭಾಗದ ರಸ್ತೆಗಳ ಅಭಿವೃದ್ಧಿಗೆ ಚಾಲನೆ ನೀಡಿದ್ದೇವೆ. ಗುಣಮಟ್ಟದ ರಸ್ತೆಗಳು ನಿರ್ಮಾಣಗೊಂಡಿವೆ. ಬಹಳಷ್ಟು ವರ್ಷಗಳ ಕಾಲ ಅಧಿಕಾರ ನಡೆಸಿದವರು, ರಸ್ತೆಗಳ ಅಭಿವೃದ್ಧಿಗೆ ಕಾಳಜಿ ವಹಿಸಿರಲಿಲ್ಲ. ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಿದ್ದೇವೆ ಎಂದು ಹೇಳಿದರು.

ಕೋವಿಡ್ ದಿಂದ ಅಭಿವೃದ್ಧಿ ಕಾರ್ಯ ಸ್ಥಗಿತಗೊಂಡಿವೆ. ಸರ್ಕಾರದಿಂದ ಯಾವ ಅನುದಾನವೂ ಬರುತ್ತಿಲ್ಲ. ಮಂಜೂರಾದ ಕಾಮಗಾರಿಗಳನ್ನು ಜಾರಿ ಮಾಡಲಾಗುತ್ತಿಲ್ಲ. ಇದರಿಂದ ಅಭಿವೃದ್ಧಿಗೆ ಹಿನ್ನಡೆಯಾಗಿದೆ. ಹಿಂದೆ ಕುಮಾರಸ್ವಾಮಿ ನೇತೃತ್ವದ ಸರ್ಕಾರ ನೀಡಿದ್ದ ಅನುದಾನವನ್ನು ಸರ್ಕಾರ ತಡೆ  ಹಿಡಿದಿದೆ. ಕೊರೊನಾ ನಿಯಂತ್ರಣಕ್ಕೆ ಹೆಚ್ಚು ಹಣ ಖರ್ಚು ಮಾಡಲಾಗಿದೆ ಎಂದು ಹೇಳಿದರು.

ರೈತರಿಗೆ ಸಂಕಷ್ಟ: ಕೊತ್ತತ್ತಿಗೆ ಬಸ್‌ ನಿಲ್ದಾಣದ ಭೂಮಿ ಪೂಜೆ ನೆರವೇರಿಸಿ, ಹಲವಾರು ದಿನಗಳಾಗಿವೆ. ಈವರೆಗೂ ಕಾಮಗಾರಿ ಆರಂಭವಾಗಿಲ್ಲ. ಕಾಮಗಾರಿ ಗುತ್ತಿಗೆ ಪಡೆದವರು ಆದಷ್ಟು ಬೇಗ ಕೆಲಸ ಆರಂಭಿಸಬೇಕು. ರಾಜ್ಯ ಸರ್ಕಾರ ರಾಗಿ ಮತ್ತು ಭತ್ತ ಖರೀದಿಯನ್ನು ನಿರೀಕ್ಷಿತ ಪ್ರಮಾಣದಲ್ಲಿ ಖರೀದಿ ಮಾಡಿಲ್ಲ. ರೈತರಿಗೆ ಸಕಾಲದಲ್ಲಿ ಹಣವನ್ನು ಪಾವತಿಸಿಲ್ಲ. ಇದರಿಂದ ರೈತರು ಸಂಕಷ್ಟದಲ್ಲಿದ್ದಾರೆ ಎಂದರು.

ಜಿಪಂ ಸದಸ್ಯ ತೂಬಿನಕೆರೆ ರಾಮಲಿಂಗಯ್ಯ, ತಾಪಂ ಮಾಜಿ ಸದಸ್ಯ ಭಾಸ್ಕರ್‌, ಬೋರೇಗೌಡ, ಕೆ.ಸಿದ್ದೇಗೌಡ, ರಾಜೇಗೌಡ, ಗ್ರಾಪಂ ಅಧ್ಯಕ್ಷ ಸೋಮಶೇಖರ್‌ ಹಾಜರಿದ್ದರು.

Advertisement

ಸರ್ಕಾರದಿಂದ ದುಂದುವೆಚ್ಚ  :  ಜಿಲ್ಲಾಡಳಿತದಿಂದಲೇ ದುಂದುವೆಚ್ಚವಾಗಿದ್ದು, ಕೆಆರ್‌ಎಸ್‌ ಬಾಗಿನ ಕಾರ್ಯಕ್ರಮ ಆಯೋಜನೆ ಯನ್ನು ಖಾಸಗಿಯವರಿಗೆ ಗುತ್ತಿಗೆ ನೀಡಿದ್ದು, ನಾಚಿಕೆಗೇಡಿನ ವಿಚಾರ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ಟೀಕಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, 2 ಲಕ್ಷ ರೂ.ವೆಚ್ಚದಲ್ಲಿ ಮುಗಿಯಬೇಕಾದ ಕಾರ್ಯಕ್ರಮಕ್ಕೆ 13 ಲಕ್ಷ ರೂ. ಖರ್ಚು ಮಾಡಲಾಗಿದೆ. ಬಾಳೆಕಂದು, ಮಾವಿನ ಸೊಪ್ಪು, ಶಾಮಿಯಾನ, ವಿಡಿಯೋ, ಪೋಟೋಗೆ ಅಷ್ಟು ಹಣ ಖರ್ಚಾಗುವುದಿಲ್ಲ. ಹಿಂದೆ ನಾವು ಬಾಗಿನ ಕಾರ್ಯಕ್ರಮ ನಡೆಸಿದ್ದೇವೆ. ದುಂದುವೆಚ್ಚಕ್ಕೆ ಜಿಲ್ಲಾಡಳಿತವೇ ಹೊಣೆ ಎಂದು ಆರೋಪಿಸಿದರು. ಬಾಗಿನ ಕಾರ್ಯಕ್ರಮ ಆಯೋಜನೆಗೆ ಸ್ಥಳೀಯ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಕ್ಷೇತ್ರದ ಶಾಸಕರ ಮಾತಿಗೆ ಬೆಲೆ ಇಲ್ಲವಾಗಿದೆ. ಡೀಸಿ, ಪೊಲೀಸ್‌ ಅಧೀಕ್ಷಕರು ಮತ್ತು ಅಧಿಕಾರಿಗಳು ಒಂದು ಪಕ್ಷದ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next