Advertisement

ಕೆಂಪೇಗೌಡರ ತತ್ವದಡಿ ಕೆರೆಗಳ ಅಭಿವೃದ್ಧಿ

11:14 AM Jun 25, 2017 | Team Udayavani |

ಕೆಂಗೇರಿ: ನಾಡಿನ ಹಿತಕ್ಕಾಗಿ ಕೆರೆಗಳನ್ನು ಅಭಿವೃದ್ಧಿಪಡಿಸಿದ್ದ ಕೆಂಪೇಗೌಡರ ದೂರದೃಷ್ಟಿ ಚಿಂತನೆಯ ಅಡಿಯಲ್ಲೇ ಯಶವಂತಪುರ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಕೆರೆಗಳನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಶಾಸಕ ಎಸ್‌.ಟಿ.ಸೋಮಶೇಖರ್‌ ತಿಳಿಸಿದ್ದಾರೆ. 

Advertisement

ಉಲ್ಲಾಳು ಕೆರೆಗೆ ಹರಿಯುತ್ತಿದ್ದ ಒಳಚರಂಡಿ ನೀರನ್ನು ಬೇರೆ ಕಡೆಗಳಿಗೆ ಹರಿಸುವ ಕಾಮಗಾರಿಗೆ ಚಾಲನೆ ನೀಡಿದ ಅವರು, “ಕೆರೆಗೆ ಒಳಚರಂಡಿ ನೀರು ಹರಿಯುವುದನ್ನ ತಪ್ಪಿಸಲು ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಉಲ್ಲಾಳು ಕೆರೆಯನ್ನು ಅಭಿವೃದ್ಧಿಪಡಿಸಲಾಗುವುದು. ಕೆರೆಯ ಸುತ್ತ ವಾಯುವಿಹಾರಕ್ಕೆ ಸೂಕ್ತ ವಾತಾವರಣ ಕಲ್ಪಿಸಲಾಗುವುದು,’ ಎಂದರು. 

ಹೇರೋಹಳ್ಳಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬಿ.ಅನಿಲ್‌ ಕುಮಾರ್‌ ಮಾತನಾಡಿ, “ಕೆರೆಯ ಸಮಸ್ಯೆ ಕುರಿತು ಶಾಸಕರಿಗೆ ತಿಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು,  ಮೂರು ಕೋಟಿ ರೂ ವೆಚ್ಚದಲ್ಲಿ ಕೆರೆ ಅಭಿವೃದ್ಧಿ ಪಡಿಸುತ್ತಿದ್ದಾರೆ,’ ಎಂದರು. 

ಗ್ರಾಮಪಂಚಾಯಿತಿ ಮಾಜಿ ಸದಸ್ಯ ಬಸಪ್ಪ, ಉಪಕಾರ ಬಡಾವಣೆಯ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಶಿವಕುಮಾರ್‌, ವಿಶ್ವೇಶ್ವರಯ್ಯ 5ನೇ ಹಂತ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಡಿ.ಎಸ್‌.ಗೌಡ, ಬಿಬಿಎಂಪಿ ಕೆರೆ ಅಭಿವೃದ್ಧಿ ವಿಭಾಗದ ಕಾರ್ಯಪಾಲಕ ಅಭಿಯಂತರ ರವಿ ಮತ್ತಿತರರು ಇದ್ದರು. 

Advertisement

Udayavani is now on Telegram. Click here to join our channel and stay updated with the latest news.

Next