Advertisement

ವ್ಯಕ್ತಿತ್ವ ವಿಕಸನದಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ- ಸಚಿವ ಡಾ‌. ನಾರಾಯಣಗೌಡ

05:20 PM Jul 23, 2021 | Team Udayavani |

ಬೆಂಗಳೂರು : ಕೊರೊನಾ ಎದುರಿಸಲು ಮಾನಸಿಕ ಧೈರ್ಯ ಮುಖ್ಯ. ಬಂಧುಬಳಗ ಕಳೆದುಕೊಂಡು ಆಘಾತಕ್ಕೊಳಗಾದವರಿಗೆ ಮಾನಸಿಕ ಧೈರ್ಯ ತುಂಬುವ ಕೆಲಸ ಆಗಬೇಕು. ಪ್ರಾಥಮಿಕ ಮಾನಸಿಕ ಚಿಕಿತ್ಸೆ ನೀಡುವ ಬಗ್ಗೆ ಯುವ ಜನರಿಗೆ ತರಬೇತಿ ನೀಡುವ ಕಾರ್ಯ ನಿಮ್ಹಾನ್ಸ್ ಸಂಸ್ಥೆ ಮಾಡುತ್ತಿರುವುದು ಶ್ಲಾಘನೀಯ ಎಂದು ಯುವ ಸಬಲೀಕರಣ ಮತ್ತು ಕ್ರೀಡೆ ಇಲಾಖೆ ಸಚಿವ ಡಾ. ನಾರಾಯಣಗೌಡ ಹೇಳಿದರು.

Advertisement

ಇಂದು (ಶುಕ್ರವಾರ, ಜುಲೈ 23) ನಿಮ್ಹಾನ್ಸ್ ಆವರಣದಲ್ಲಿ ನಡೆದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಯುವಜನತೆಗೆ ಕೌನ್ಸಿಲಿಂಗ್ ಸ್ಕಿಲ್ ಬಗ್ಗೆ ತರಬೇತಿ ನೀಡುವುದರಿಂದ ಎರಡು ರೀತಿಯ ಉಪಯೋಗ ಇದೆ. ಮಾನಸಿಕ ಆಘಾತಕ್ಕೆ ಒಳಗಾದವರಿಗೆ ತರಬೇತಿ ಪಡೆದವರು ಮಾನಸಿಕ ಧೈರ್ಯ ತುಂಬುವ ಕೆಲಸಮಾಡುತ್ತಾರೆ. ಇದರಿಂದ ಎಷ್ಟೋ ಜನರ ಬದುಕು ಬದಲಾಗುತ್ತದೆ. ಖಿನ್ನತೆಯಿಂದ ಹೊರಬಂದು ಉತ್ತಮ ಜೀವನ ಮಾಡಲು ಸಾಧ್ಯವಾಗುತ್ತದೆ. ಯುವಜನತೆ  ಇಂತಹ ಕಾರ್ಯಕ್ರಮದಲ್ಲಿ ತೊಡಗುವುದು ಬಹಳ ಉತ್ತಮ. ಯಾವುದೇ ಕೆಲಸ ಕಾರ್ಯ ಮಾಡದೆ ವ್ಯಸನಕ್ಕೆ ಒಳಗಾಗುತ್ತಾರೆ. ಅಂತಹವರನ್ನು ಗುರುತಿಸಿ ಈ ರೀತಿಯ ಕಾರ್ಯದಲ್ಲಿ ತೊಡಗುವಂತೆ ಮಾಡಬೇಕು. ನಿಮ್ಹಾನ್ಸ್ ಸಂಸ್ಥೆ ಹಮ್ಮಿಕೊಂಡಿರುವ ತರಬೇತಿ ಕಾರ್ಯ ಉತ್ತಮವಾದುದು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಎಲ್ಲ ರೀತಿಯ ಸಹಕಾರ ನೀಡುತ್ತದೆ ಎಂದು ಸಚಿವರು ಹೇಳಿದರು.

ಇದನ್ನೂ ಓದಿ : ಹಿಂದುಳಿದ ವರ್ಗಕ್ಕೆ ಸಿಎಂ ಸ್ಥಾನ ನೀಡಿ : ಹಿರಿಯ ಹೋರಾಟಗಾರ ಹೆಚ್.ನರಸಿಂಹಪ್ಪ ಒತ್ತಾಯ

ನಿಮ್ಹಾನ್ಸ್ ನಿರ್ದೇಶಕಿ ಡಾ. ಪ್ರತಿಮ ಅವರು ಮಾತನಾಡಿ, ಮಾನಸಿಕ ಆರೋಗ್ಯಕ್ಕೆ ಮಹತ್ವ ನೀಡಿದರೆ ಉತ್ತಮ ಸಮಾಜ ನಿರ್ಮಾಣ ಆಗತ್ತೆ. ಕೋವಿಡ್ ಸಂದರ್ಭದಲ್ಲಿ ಮಾನಸಿಕ ಚಿಕಿತ್ಸೆ ಅಗತ್ಯ. ಶೇ. 70 ಕ್ಕಿಂತ ಹೆಚ್ಚು ಜನರಿಗೆ ಮಾನಸಿಕ ಚಿಕಿತ್ಸೆ ಸಿಗೋದೆ ಇಲ್ಲ. ಯುವ ಜನರಿಗೆ ಈ ಬಗ್ಗೆ ತರಬೇತಿ ನೀಡಿದಾಗ, ಸಾಕಷ್ಟು ಜನರಿಗೆ ಮಾನಸಿಕ ಚಿಕಿತ್ಸೆ ದೊರೆಯಲಿದೆ. ಕೌನ್ಸಿಲಿಂಗ್ ಸ್ಕಿಲ್ ಕಲಿಯುವುದು ಬಹಳ ಮುಖ್ಯ. ಯುವಜನತೆಗೆ ಒತ್ತಡವನ್ನು ಹೇಗೆ ಎದುರಿಸುವುದು ಹೇಗೆ ಎಂದು ತಿಳಿದಿಲ್ಲ. ಆದ್ರೆ ಕೌನ್ಸಿಲಿಂಗ್ ಸ್ಕಿಲ್ ನಿಂದ ಯುವ ಜನತೆಯ ಮನಃಪರಿವರ್ತನೆ ಸಾಧ್ಯ ಎಂದು ಹೇಳಿದರು. ರಾಜ್ಯದಲ್ಲಿ 5 ಲಕ್ಷಕ್ಕು ಯುವ ಜನರಿಗೆ ತರಬೇತಿ ನೀಡುವ ಗುರಿ ಇದೆ. ಎನ್ಎಸ್ಎಸ್, ಯುವ ಸ್ಪಂದನ, ಯುವಜನ ಸಂಘ ಸೇರಿದಂತೆ ವಿವಿಧ ಸಂಘಗಳಲ್ಲಿರುವ ಯುವಕ- ಯುವತಿಯರಿಗೆ ತರಬೇತಿ ನೀಡಲಾಗುವುದು ಎಂದು ಹೇಳಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಅಸ್ಸಾಂ ಸರ್ಕಾರದ ಕಂದಾಯ ಮಂಡಳಿ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿ ಅರ್ಚನಾ ವರ್ಮ, ನಿಮ್ಹಾನ್ಸ್ ನಿರ್ದೇಶಕಿ ಡಾ. ಪ್ರತಿಮಾ ಮೂರ್ತಿ, ನಿಮ್ಹಾನ್ಸ್ ಕುಲಸಚಿವ ಡಾ. ಬಿಎಸ್ ಶಂಕರನಾರಾಯಣ, ನಿಮ್ಹಾನ್ಸ್ ಪ್ರೊಪೆಸರ್ ಡಾ. ಪ್ರದೀಪ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Advertisement

ಇದನ್ನೂ ಓದಿ : ಹಳಿ ಮೇಲೆ ನಿಂತ ಮಳೆ ನೀರು : ಸಾಗರದಿಂದ ಹೊರಡಲಿದೆ ತಾಳಗುಪ್ಪ-ಮೈಸೂರು ರೈಲು

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next