Advertisement

ಸಚಿವರ ಅಭಿವೃದ್ಧಿ ಕಾರ್ಯಕ್ಕೆ ಸಂದ ಜಯ

03:23 PM Apr 10, 2017 | Team Udayavani |

ಚಿತ್ತಾಪುರ: ತಾಲೂಕಿನ ವಾಡಿ ಪುರಸಭೆಯ 23 ವಾರ್ಡ್‌ಗಳಲ್ಲಿ ಕಾಂಗ್ರೆಸ್‌ನ 13 ಅಭ್ಯರ್ಥಿಗಳು ಗೆಲುವು ಸಾಧಿಧಿಸಿದ್ದಾರೆ. ಇದು 2000 ಕೋಟಿ ರೂ. ಅನುದಾನ ತಂದು ಅಭಿವೃದ್ಧಿ ಮಾಡಿರುವ ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ಸಂದ ಜಯವಾಗಿದೆ ಎಂದು ಚಿತ್ತಾಪುರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಭೀಮಣ್ಣ ಸಾಲಿ, ವಾಡಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸೈಯದ್‌ ಮಹೇಮೂದ್‌ ಸಾಹೇಬ್‌ ತಿಳಿಸಿದರು. 

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿತ್ತಾಪುರ ತಾಲೂಕಿನಲ್ಲಿ ಮೊದಲಿನಿಂದಲೂ ಮತದಾರರು ಕಾಂಗ್ರೆಸ್‌ ಪರ ಇದ್ದಾರೆ. ಚಿತ್ತಾಪುರ ಕ್ಷೇತ್ರ ಕಾಂಗ್ರೆಸ್‌ ಭದ್ರಕೋಟೆ ಎಂಬುದಕ್ಕೆ ವಾಡಿ ಪುರಸಭೆ ಚುನಾವಣೆ ಫಲಿತಾಂಶವೇ ಸಾಕ್ಷಿಯಾಗಿದೆ ಎಂದು ಸಂತಸ ವ್ಯಕ್ತ ಪಡಿಸಿದರು. 

ವಾಡಿ ಪುರಸಭೆ ಒಟ್ಟು 23 ವಾರ್ಡ್‌ಗಳಲ್ಲಿ 15 ಸ್ಥಾನಗಳನ್ನು ಗೆಲ್ಲುತ್ತಾರೆ ಎನ್ನುವ ವಿಶ್ವಾಸ ಇತ್ತು. ಆದರೆ ಕೆಲವು ವಾರ್ಡ್‌ಗಳಲ್ಲಿ ಸ್ವಲ್ಪ ಮತಗಳಿಂದ ನಮ್ಮ ಅಭ್ಯರ್ಥಿಗಳು ಸೋತಿದ್ದಾರೆ. ನೀರಿಕ್ಷೆಗೊ ಮೀರಿ  ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲುವು ಸಾಧಿಸುವುದರ ಮೂಲಕ ಬಿಜೆಪಿಗೆ ತಕ್ಕ ಪಾಠ ಕಲಿಸಿರುವುದು ಸಂತಸ ತಂದಿದೆ ಎಂದು ತಿಳಿಸಿದರು. 

ಬಿಜೆಪಿಯವರು ಎಷ್ಟೇ ಆಮಿಷ ತೋರಿಸಿದರೂ ವಾರ್ಡ್‌ ಮತದಾರರು ಮಾತ್ರ ಅದನ್ನ ಲೇಕ್ಕಿಸದೇ ಅಭಿವೃದ್ಧಿಗೆ ಮೆಚ್ಚಿ ಮತ ನೀಡಿದ್ದಾರೆ. ಹೀಗಾಗಿ ಬಿಜೆಪಿ ಪರ ಅಭ್ಯರ್ಥಿಗಳು ಹೀನಾಯ ಸೋಲು ಅನುಭವಿಸುವುದರ ಮೂಲಕ ವಾಡಿ ಸರ್ವಾಂಗೀಣ ಅಭಿವೃದ್ಧಿ ಮಾಡಲು ಸಚಿವರ ಕೈ ಹಿಡಿದಿದ್ದಾರೆ ಎಂಬುದಕ್ಕೆ ಪುರಸಭೆ ಚುನಾವಣೆ ಫಲಿತಾಂಶವೇ ಸಾಕ್ಷಿಯಾಗಿದೆ ಎಂದು ತಿಳಿಸಿದರು. 

ಜಿಪಂ ಸದಸ್ಯರಾದ ಶಿವಾನಂದ ಪಾಟೀಲ, ಶಿವರುದ್ರ ಭೀಣಿ, ಪುರಸಭೆ ಅಧ್ಯಕ್ಷೆ ಅನ್ನಪೂರ್ಣ ಹೋತಿನಮಡಿ, ಮುಖಂಡರಾದ ಶಂಕ್ರಯ್ಯಸ್ವಾಮಿ ಮದ್ರಕಿ, ಹಣಮಂತ ಸಂಕನೂರ, ಭೀಮಣ್ಣ ಹೋತಿನಮಡಿ, ಮಲ್ಲಿಕಾರ್ಜುನ ಮುಡಬೂಳ, ಇಸ್ಮಾಯಿಲ್‌ಸಾಬ ಕಮರವಾಡಿ,  ರವಿ ಚವ್ಹಾಣ, ನಾಗಯ್ಯ ಗುತ್ತೇದಾರ, ಶರಣು ಡೋಣಗಾಂವ, ರಾಜು ಹಿರೇಮಠ ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next