Advertisement

ಗ್ರಾಮ ಪಂಚಾಯ್ತಿ ಗೊಂದು ಕೆರೆ ಅಭಿವೃದಿ

01:04 PM Jul 07, 2019 | Team Udayavani |

ರಾಮನಗರ: ತಾಲೂಕಿನ ಪ್ರತಿ ಗ್ರಾಮ ಪಂಚಾಯ್ತಿಯ ತಲಾ ಒಂದು ಕರೆಯನ್ನು ಜಲಾಮೃತ ಕಾರ್ಯಕ್ರಮದಡಿಯಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ತಾಲೂಕು ಪಂಚಾಯ್ತಿ ಇಒ ಎಂ.ಬಾಬು ಹೇಳಿದರು. ತಾಲೂಕಿನ ಕೈಲಾಂಚ ಹೋಬಳಿಯ ಬನ್ನಿಕುಪ್ಪೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕರೆ ಅಭಿವೃದ್ಧಿ ಕಾಮಗಾರಿಯನ್ನು ವೀಕ್ಷಿಸಲು ಭೇಟಿ ನೀಡಿದ್ದ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಜಲಾಮೃತ ಕಾರ್ಯಕ್ರಮ ದಡಿಯಲ್ಲಿ ನರೇಗಾ ಯೋಜನೆಯನ್ನು ಬಳಸಿ ಕೊಂಡು ಕರೆ ಅಭಿವೃದ್ದಿ ಕಾಮಗಾರಿ ಕೈಗೊಳ್ಳಲಾಗಿದೆ. ಕಾಮಗಾರಿಯ ಗುಣಮಟ್ಟ ಪರಿಶೀಲನೆಗೆ ತಾವು ಆಗಿಮಿಸಿದ್ದೇನೆ. ಜಲಾಮೃತ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಜಿಲ್ಲಾ ಪಂಚಾಯತ್‌ನಿಂದ ಕ್ರಿಯಾ ಯೋಜನೆಗೆ ಮಾಡಿ ಅನುಮೋದನೆ ಪಡೆದುಕೊಳ್ಳಲಾಗಿದೆ ಎಂದರು.

Advertisement

ಕೆರೆ ಅಭಿವೃದ್ದಿಯ ಜೊತೆಗೆ, ಕೆರೆಗೆ ನೀರು ಹರಿದು ಬರುವ ಕಾಲುವೆ, ಹಳ್ಳ, ನಾಲೆಗಳನ್ನು ಸಹ ದುರಸ್ತಿ ಕೈಗೊಳ್ಳಲಾಗುವುದು. ಅಗತ್ಯ ವಿರುವೆಡೆ ಜೆಕ್‌ ಡ್ಯಾಂಗಳನ್ನು ನಿರ್ಮಿಸಲಾಗುವುದು. ಕೆರೆ ಯಲ್ಲಿ ನೀರು ನಿಂತರೆ ಪ್ರಾಣಿ-ಪಕ್ಷಿಗಳಿಗೆ ನೀರು ಸಿಗಲಿದೆ. ಅಂತರ್ಜಲ ಮಟ್ಟವು ಸುಧಾರಿಸಲಿದೆ. ಕಾರ್ಯಕ್ರಮದ ಯಶಸ್ವಿಗೆ ಕೃಷಿ, ತೋಟಗಾರಿಕೆ, ಅರಣ್ಯ ಇಲಾಖೆ ಸಹಯೋಗ ಪಡೆದು ನರೇಗಾ ಯೋಜನೆಯಡಿಯಲ್ಲಿ ಕಾಮಗಾರಿಯನ್ನು ನಡೆಸಲಾಗುತ್ತಿದೆ ಎಂದು ಹೇಳಿದರು. ಜಲಾಮೃತ ಕಾರ್ಯಕ್ರಮದ ಯಶಸ್ಸಿಗೆ ಗ್ರಾಪಂ ಅಧ್ಯಕ್ಷರು, ಸದಸ್ಯರು, ಪಿಡಿಓಗಳು ಸೇರಿದಂತೆ ಸಾರ್ವಜನಿಕರು ಸಹಕರಿಸುತ್ತಿದ್ದು ತಾಲೂಕಿನಲ್ಲಿ ಈಗಾಗಲೇ 10 ಕೆರೆಗಳಲ್ಲಿ ಅಭಿವೃದ್ಧಿ ಕಾಮಗಾರಿ ಗಳು ಪ್ರಗತಿಯಲ್ಲಿವೆ ಎಂದು ಹೇಳಿದರು. ಗ್ರಾಪಂ ಅಭಿವೃದ್ಧಿ ಅಧಿಕಾರಿ ಜಯಶಂಕರ್‌ ಮಾತನಾಡಿ, ಗ್ರಾಪಂನಲ್ಲಿ ಸಮುದಾಯ ಕೆಲಸಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ರಸ್ತೆ, ಚರಂಡಿ ಕಾಲುವೆಗಳ ಮರು ನಿರ್ಮಾಣ ಸೇರಿದಂತೆ ಕೆರೆ-ಕುಂಟೆಗಳ ಅಭಿವೃದ್ಧಿಗೆ ಪ್ರಥಮ ಆಧ್ಯತೆ ನೀಡಿದೆ. ಜಲಾಮೃತ ವರ್ಷ 2019 ರ ಸರ್ಕಾರಿ ಕಾರ್ಯಕ್ರಮದ ಅಂಗವಾಗಿ ಬನ್ನಿಕುಪ್ಪೆ ಗ್ರಾಮದ ದೊಡ್ಡಕೆರೆ ಅಭಿವೃದ್ಧಿ ಪಡಿಸಲಾಗುತ್ತಿದೆ. ಜಲಮರು ಪೂರ್ಣ ಯೋಜನೆ ಮುಖಾಂತರ ನರೇಗಾ ಯೋಜನೆ ಯಶಸ್ಸಿಗೆ ಗ್ರಾಪಂ ಮುಂದಾಗಿದೆ ಎಂದರು.ಗ್ರಾಪಂ ಅಧ್ಯಕ್ಷ ಸುರೇಶ್‌, ಉಪಾಧ್ಯಕ್ಷೆ ಭಾಗ್ಯ ಚಂದ್ರಗಿರಿ, ಸದಸ್ಯ ಶಂಕರ್‌, ಬಿಲ್‌ಕಲೆಕ್ಟರ್‌ ಗಿರೀಶ್‌, ಮುಖಂಡರಾದ ಕೆಂಪೇಗೌಡ, ವೆಂಕಟೇಶ್‌, ಪಾಪಣ್ಣ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next