Advertisement

“ಅಭಿವೃದ್ಧಿ ಕೆಲಸಗಳೇ ಕಾಂಗ್ರೆಸ್‌ ಪಕ್ಷದ ಗೆಲುವಿಗೆ ಸ್ಪೂರ್ತಿ’

06:35 AM Mar 31, 2018 | Team Udayavani |

ಕಾಪು: ಕಾಪು ಕ್ಷೇತ್ರದಲ್ಲಿ ನಡೆಸಿರುವ ಅಭಿವೃದ್ಧಿ ಕೆಲಸಗಳೇ ಕಾಂಗ್ರೆಸ್‌ ಪಕ್ಷದ ಗೆಲುವಿಗೆ ಸ್ಪೂರ್ತಿಯಾಗಲಿದೆ. ಅದನ್ನು ಜನರಿಗೆ ತಿಳಿಸಿ ಕೊಡುವ ಕೆಲಸ ಕಾರ್ಯಕರ್ತರಿಂದ ನಡೆಯಬೇಕಿದೆ ಎಂದು ಶಾಸಕ ವಿನಯ ಕುಮಾರ್‌ ಸೊರಕೆ ಹೇಳಿದರು.

Advertisement

ಕಾಪು ರಾಜೀವ ಭವನದಲ್ಲಿ ಶುಕ್ರವಾರ ನಡೆದ ಕಾಪು ಬ್ಲಾಕ್‌ ಕಾಂಗ್ರೆಸ್‌ ಹಿಂದುಳಿದ ವರ್ಗಗಳ ಘಟಕದ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಕಾಪು ಬ್ಲಾಕ್‌ ಕಾಂಗ್ರೆಸ್‌ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ದೀಪಕ್‌ ಕುಮಾರ್‌ ಎರ್ಮಾಳ್‌ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾಂಗ್ರೆಸ್‌ ಉಪಾಧ್ಯಕ್ಷ ಕಾಪು ದಿವಾಕರ ಶೆಟ್ಟಿ, ಕೆಪಿಸಿಸಿ ಕಾರ್ಯದರ್ಶಿ ಡಾ| ದೇವಿಪ್ರಸಾದ್‌ ಶೆಟ್ಟಿ, ಕಾಂಗ್ರೆಸ್‌ ಚುನಾವಣಾ ಉಸ್ತುವಾರಿ ದಿನೇಶ್‌ ಕೋಟ್ಯಾನ್‌ ಪಲಿಮಾರು, ಕಾಪು ಪುರಸಭಾ ಅಧ್ಯಕ್ಷೆ ಮಾಲಿನಿ, ಕಾಪು ಬ್ಲಾಕ್‌ ಕಾಂಗ್ರೆಸ್‌ ಕಾರ್ಯದರ್ಶಿ ವಿನಯ ಬಲ್ಲಾಳ್‌, ಹಿಂದುಳಿದ ವರ್ಗಗಳ ಘಟಕದ ಕಾರ್ಯದರ್ಶಿ ಸುಮನ್‌ ಬೋಳಾರ್‌, ಅಲ್ಪಸಂಖ್ಯಾಕ ಘಟಕದ ಅಧ್ಯಕ್ಷ ಎಚ್‌. ಅಬ್ದುಲ್ಲಾ, ಇಂಟಕ್‌ ಜಿಲ್ಲಾಧ್ಯಕ್ಷ ಗಣೇಶ್‌ ಕೋಟ್ಯಾನ್‌ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next