Advertisement
ಇದರ ಬೆನ್ನಲ್ಲೇ ಇಂದು ಮಧ್ಯಾಹ್ನ 3.30ಕ್ಕೆ ಪತ್ರಿಕಾಗೋಷ್ಠಿ ನಡೆಸಿದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ತುರ್ತು ಪತ್ರಿಕಾಗೋಷ್ಠಿ ನಡೆಸಿದರು. ಮತ್ತು ಈ ಪತ್ರಿಕಾಗೋಷ್ಠಿಯಲ್ಲಿ ದೇವೇಂದ್ರ ಫಡ್ನವೀಸ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ತಾನು ರಾಜೀನಾಮೆ ಸಲ್ಲಿಸುತ್ತಿರುವ ವಿಚಾರವನ್ನು ಪ್ರಕಟಿಸಿದರು.
Related Articles
Advertisement
ಆ ಬಳಿಕ ಸದ್ಯದ ಪರಿಸ್ಥಿತಿಯಲ್ಲಿ ಭಾರತೀಯ ಜನತಾ ಪಕ್ಷದ ಬಳಿಯಲ್ಲಿ ಸರಕಾರ ರಚನೆ ಮಾಡುವಷ್ಟು ಸಂಖ್ಯಾಬಲ ಇಲ್ಲದೇ ಇರುವುದರಿಂದ ತಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ದೇವೇಂದ್ರ ಫಡ್ನವೀಸ್ ಅವರು ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದರು.
ಮುಂಬರುವ ದಿನಗಳಲ್ಲಿ ಮಹಾರಾಷ್ಟ್ರದಲ್ಲಿ ಸರಕಾರ ರಚಿಸಲು ಉದ್ದೇಶಿಸಿರುವ ಶಿವಸೇನೆ, ಎನ್.ಸಿ.ಪಿ. ಮತ್ತು ಕಾಂಗ್ರೆಸ್ ಪಕ್ಷಗಳ ತತ್ವ ಸಿದ್ಧಾಂತಗಳು ಭಿನ್ನವಾಗಿರುವುದರಿಂದ ಅವರು ಮುಂಬರುವ ದಿನಗಳಲ್ಲಿ ಏಕಮುಖವಾಗಿ ಸಾಗುವುದು ಕಷ್ಟ ಎಂಬ ಭವಿಷ್ಯವನ್ನು ಫಡ್ನವೀಸ್ ಇದೇ ಸಂದರ್ಭದಲ್ಲಿ ನುಡಿದರು. ಮತ್ತು ಇದರಿಂದ ಮಹಾರಾಷ್ಟ್ರದ ಅಭಿವೃದ್ಧಿಗೆ ಹಿನ್ನಡೆಯಾಗಲಿದೆ ಎಂಬ ಭೀತಿಯನ್ನು ಅವರು ವ್ಯಕ್ತಪಡಿಸಿದರು.
ಮಹಾರಾಷ್ಟ್ರದಲ್ಲಿ ಬಿಜೆಪಿ ರಚನಾತ್ಮಕ ಪ್ರತಿಪಕ್ಷವಾಗಿ ಕಾರ್ಯನಿರ್ವಹಿಸಲಿದೆ ಎಂಬ ವಿಶ್ವಾಸವನ್ನು ದೇವೇಂದ್ರ ಫಡ್ನವೀಸ್ ಅವರು ಈ ಸಂದರ್ಭದಲ್ಲಿ ವ್ಯಕ್ತಪಡಿಸಿದರು. ಮತ್ತು ತಮ್ಮ ನೇತೃತ್ವದ ಸರಕಾರವನ್ನು ಕಳೆದ ಐದು ವರ್ಷಗಳಲ್ಲಿ ಬೆಂಬಲಿಸಿದ ಮಹಾರಾಷ್ಟ್ರದ ಜನತೆಗೆ ಫಡ್ನವೀಸ್ ಅವರು ವಿಶೇಷವಾಗಿ ಅಭಿನಂದನೆಗಳನ್ನು ಸಲ್ಲಿಸಿದರು.