Advertisement

ಸ್ಮಾರ್ಟ್‌ ಸಿಟಿ ಯೋಜನೆಗೆ ಬಳ್ಳಾರಿ ಸೇರಿಸಲು ನಿರ್ಮಲಾ ಸೀತಾರಾಮನ್‌ಗೆ ದೇವೇಂದ್ರಪ್ಪ ಮನವಿ

04:52 PM Oct 04, 2020 | keerthan |

ಬಳ್ಳಾರಿ: ಕಲ್ಯಾಣ ಕರ್ನಾಟಕದ ಪ್ರಮುಖ ಕೇಂದ್ರವಾಗಿರುವ ಬಳ್ಳಾರಿ ನಗರವನ್ನು ಕೇಂದ್ರ ಸರಕಾರದ ಸ್ಮಾರ್ಟ್‌ ಸಿಟಿ ಯೋಜನೆಗೆ ಸೇರ್ಪಡೆಗೊಳಿಸಿ ಎಂದು ಬಳ್ಳಾರಿ ಸಂಸದ ವೈ ದೇವೇಂದ್ರಪ್ಪ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಮನವಿ ಸಲ್ಲಿಸಿದ್ದಾರೆ.

Advertisement

ಇತ್ತೀಚೆಗೆ ದೆಹಲಿಯಲ್ಲಿ ಸಚಿವರನ್ನು ಭೇಟಿಯಾಗಿ ಮನವಿ ಪತ್ರವನ್ನು ಸಲ್ಲಿಸಿದ ಅವರು ತಮ್ಮ ಮನವಿ ಪತ್ರದಲ್ಲಿ ಬಳ್ಳಾರಿ ಹಾಗೂ ಕಲಬುರ್ಗಿ ಮಾತ್ರ ಕಲ್ಯಾಣ ಕರ್ನಾಟಕ ಭಾಗದಲ್ಲಿರುವ ನಗರಪಾ ಲಿಕೆಗಳಾಗಿವೆ. ಅತ್ಯಂತ ಹಳೆಯ ನಗರವಾಗಿರುವ ಬಳ್ಳಾರಿ ಆರ್ಥಿಕತೆಯ ಪ್ರಮುಖ ಕೇಂದ್ರವಾಗಿದೆ. ರಾಜ್ಯದ ಎರಡು ಜಿಲ್ಲೆಗಳು ಹಾಗೂ ಆಂದ್ರ ಪ್ರದೇಶ ರಾಜ್ಯದ ಮೂರು ಜಿಲ್ಲೆಗಳ ಮಧ್ಯೆ ಪ್ರಮುಖ ಸ್ಥಾನವನ್ನು ಪಡೆದುಕೊಂಡಿದೆ.

ಇದನ್ನೂ ಓದಿ:ಬೋಸ್ಟನ್ ವಿ.ವಿಯ ಎಂಎಸ್ ಸ್ನಾತಕೋತ್ತರ ಪದವೀಧರೆ ಡಿಕೆ ರವಿ ಪತ್ನಿ ಕುಸುಮಾ ರವಿ

ಸ್ಮಾರ್ಟ್‌ ಸಿಟಿ ಯೋಜನೆಯ ಅಡಿಯಲ್ಲಿ ಬಳ್ಳಾರಿಯನ್ನು ಸೇರ್ಪಡೆಗೊಳಿ ಸಿಕೊಳ್ಳುವುದರಿಂದ ನಗರದ ಮೂಲಭೂತ ಸೌಕರ್ಯಗಳು ಹೆಚ್ಚಾಗುತ್ತವೆ. ಅಲ್ಲದೆ ಈ ಭಾಗದಲ್ಲಿ ಆರ್ಥಿಕತೆಗೆ ಪುಷ್ಠಿಯನ್ನು ನೀಡುತ್ತವೆ ಎಂದು ದೇವೇಂದ್ರಪ್ಪ ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next