Advertisement

ದೇವರಾಜ್‌ ಅರಸು ಜಯಂತಿ ಅದ್ಧೂರಿ ಆಚರಣೆ

11:25 AM Aug 18, 2017 | |

ಯಾದಗಿರಿ: ಜಿಲ್ಲಾಡಳಿತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಇನ್ನಿತರ ಇಲಾಖೆಗಳ ಆಶ್ರಯದಲ್ಲಿ ಆ.23ರಂದು ಬೆಳಗ್ಗೆ 11:00 ಗಂಟೆಗೆ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಮಾಜಿ ಸಿಎಂ ದಿ. ದೇವರಾಜ್‌ ಅರಸು ಅವರ 102ನೇ ಜಯಂತ್ಯುತ್ಸವನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಯಿತು. ನಗರದ ಜಿಲ್ಲಾ ಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಮಂಜುನಾಥ್‌ ಜೆ. ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿ ಕಾರಿ, ಆಗಸ್ಟ್‌ 20ರಂದು ಬೆಳಗ್ಗೆ 9:00 ಗಂಟೆಗೆ ಎಲ್ಲಾ ಸರಕಾರಿ, ಸರ್ಕಾರೇತರ ಕಚೇರಿಗಳಲ್ಲಿ ಹಾಗೂ ಎಲ್ಲಾ ಸರಕಾರಿ, ಸರ್ಕಾರೇತರ, ಅನುದಾನಿತ ಶಾಲಾ / ಕಾಲೇಜುಗಳಲ್ಲಿ, ವಸತಿ ನಿಲಯಗಳಲ್ಲಿ ಡಿ. ದೇವರಾಜ ಅರಸ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರ ಮೂಲಕ ಜಯಂತಿಯನ್ನು ಆಚರಿಸಬೇಕೆಂದು ಅವರು ತಿಳಿಸಿದರು. ಆ. 20ರಂದು ಕೆಪಿಎಸ್‌ಸಿಯಿಂದ ನಡೆಸಲಾಗುವ ಕೆಎಎಸ್‌ ಪೂರ್ವಭಾವಿ ಪರೀಕ್ಷೆ ಹಾಗೂ ಇತರೆ ಕಾರಣಗಳಿಂದ ಆ. 23ರಂದು ಬೆಳಗ್ಗೆ 11:00 ಗಂಟೆಗೆ ಜಿಲ್ಲಾಮಟ್ಟದ
ಕಾರ್ಯಕ್ರಮವನ್ನು ಆಚರಿಸಲು ವಿವಿಧ ಸಮುದಾಯದ ಮುಖಂಡರು ಮನವಿ ಮಾಡಿದ ಹಿನ್ನೆಲೆಯಲ್ಲಿ ಅಂದು ಜಯಂತ್ಯುತ್ಸವ ಆಚರಿಸಲು ಸಭೆ ನಿರ್ಧರಿಸಲಾಯಿತು. ಕಾರ್ಯಕ್ರಮದ ದಿನದಂದು ಜಿಲ್ಲಾಧಿಕಾರಿ ಕಚೇರಿ ಪ್ರವೇಶದ್ವಾರದಿಂದ ಕಾರ್ಯಕ್ರಮ ನಡೆಯುವ ಸ್ಥಳದವರೆಗೆ ಡಿ. ದೇವರಾಜ ಅರಸು ಅವರ ಭಾವಚಿತ್ರ ಮೆರವಣಿಗೆ ಮಾಡುವುದು. ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು, ಶಾಲಾ ಕಾಲೇಜಿನ ಆಸಕ್ತ ಮಕ್ಕಳು ಸಮವಸ್ತ್ರದೊಂದಿಗೆ ಭಾಗವಹಿ ಸುವಂತೆ ಕ್ರಮವಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಯಿತು. ವಿವಿಧ ಸಮುದಾಯಗಳ, ಸಂಘ-ಸಂಸ್ಥೆಗಳ ಮುಖಂಡರು ಮತ್ತು ಎಲ್ಲಾ ಜಿಲ್ಲಾಮಟ್ಟದ
/ ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಅವರು ತಪ್ಪದೇ ಕಾರ್ಯಕ್ರಮದಲ್ಲಿ ಭಾಗವಹಿಸಲು ಕೋರಲಾಯಿತು.
ಕಾರ್ಯಕ್ರಮಗಳ ನಿರೂಪಣೆಗೆ ಶಿವುಕುಮಾರ ಕಟ್ಟಿಮನಿ ಮತ್ತು ಉಪನ್ಯಾಸಕರನ್ನಾಗಿ ಡಾ| ಗಾಳೆಪ್ಪ ಪೂಜಾರಿ, ಪ್ರಾಂಶುಪಾಲರು, ಮೋರಾರ್ಜಿ ದೇಸಾಯಿ ವಸತಿ ಶಾಲೆ, ಮೋಟ್ನಳ್ಳಿ ಇವರನ್ನು ಆಯ್ಕೆ ಮಾಡಲಾಯಿತು. ಡಿ. ದೇವರಾಜ ಅರಸು ಅವರ ಜೀವನ ಚರಿತ್ರೆಗೆ ಸಂಬಂಧಿಸಿದಂತೆ ಸರ್ಕಾರಿ ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಗಳನ್ನು, ಭಾಷಣ ಸ್ಪರ್ಧೆ, ರಸಪ್ರಶ್ನೆ, ಕ್ರಿಡೇಗಳನ್ನು ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಏರ್ಪಡಿಸಲಾಗಿದ್ದು, ಅದರಲ್ಲಿ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ಹಾಗೂ ಸಮಾಧಾನಕರ ಬಹುಮಾನಗಳನ್ನು ದಿನಾಚರಣೆಯಂದು ನೀಡಲಾಗುವದೆಂದು ಜಿಲ್ಲಾ ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಯಾದಗಿರಿ ಇವರು ತಿಳಿಸಿದರು. 2016-17ನೇ ಸಾಲಿನಲ್ಲಿ ಜಿಲ್ಲೆಯಲ್ಲಿನ ಹಿಂದುಳಿದ ವರ್ಗಗಳ ವಸತಿ ನಿಲಯಗಳಲ್ಲಿದ್ದು, ಅಭ್ಯಾಸ ಮಾಡಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ತಲಾ 03 ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲು ನಿರ್ಧರಿಸಲಾಯಿತು.

Advertisement

ಸುರಪುರ: ಹಿಂದುಳಿದ ವರ್ಗಗಳ ಹರಿಕಾರ, ಮಾಜಿ ಮುಖ್ಯಮಂತ್ರಿ ಡಿ. ದೇವರಾಜ್‌ ಅರಸು ಅವರ ಜಯಂತಿಯನ್ನು ಆ. 20ಕ್ಕೆ ಆಯಾ ಸರಕಾರಿ ಕಚೇರಿಗಳಲ್ಲಿ, ಸರಕಾರಿ ವಸತಿ ನಿಲಯಗಳಲ್ಲಿ ಪೂಜೆಸಲ್ಲಿಸಿ ಆಚರಿಸಬೇಕು. ತಾಲೂಕಾಡಳಿತದ ವತಿಯಿಂದ 23ರಂದು ತಹಸೀಲ್‌ ಕಚೇರಿಯಲ್ಲಿ ಜಯಂತಿ ಆಯೋಜಿಸಲಾಗುವುದು ಎಂದು ಗ್ರೇಡ್‌-2 ತಹಶೀಲ್ದಾರ್‌ ಸುಫೀಯಾ ಸುಲ್ತಾನ್‌ ಹೇಳಿದರು. ಇಲ್ಲಿಯ ತಹಸೀಲ್‌ ಕಾರ್ಯಾಲಯದ ಸಭಾಂಗಣದಲ್ಲಿ ಗುರುವಾರ ಜರುಗಿದ ಡಿ. ದೇವರಾಜ ಅರಸು ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಆ. 20ರಂದು ದೇವರಾಜ ಅರಸ ಅವರ ಜಯಂತಿ ಇದ್ದು, ಅಂದು ಇಲಾಖಾವಾರು ಪರೀಕ್ಷೆಗಳಿರುವುದರಿಂದ ತಾಲೂಕಾಡಳಿತದ ವತಿಯಿಂದ ಜಯಂತಿಯನ್ನು ಮುಂದೂಡಿ 23ರಂದು ಆಚರಿಸಲು ನಿರ್ಧರಿಸಿದೆ. ಕಾರಣ ಎಲ್ಲಾ ಸರಕಾರಿ ಕಚೇರಿ, ಶಾಲಾ-ಕಾಲೇಜು, ವಸತಿ ನಿಲಯ, ಅಂಗನವಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೇರಿದಂತೆ ಇನ್ನಿತರ ಕಡೆಗಳಲ್ಲಿ ಆ. 20ರಂದೆ ಅರಸ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜಯಂತಿ ಆಚರಿಸಬೇಕು ಎಂದರು. ಜಯಂತಿ ಕಾರ್ಯಕ್ರಮದಲ್ಲಿ ಒರ್ವ ಉಪನ್ಯಾಸಕರು ಉಪನ್ಯಾಸ ನೀಡಲಿದ್ದಾರೆ. ಎಲ್ಲಾ ಇಲಾಖೆ ಅನುಷ್ಠಾನಾ ಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು. ಜಯಂತಿ ಅಂಗವಾಗಿ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಪ್ರತಿಭಾವಂತರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು. ಬಿಸಿಎಂ ಅಧಿ ಕಾರಿ ಬಾಬು, ಎಸ್‌ಟಿಒ ಮಂಗಲಕುಮಾರ ಗುಡುಗುಂಟಿ, ಉಪವಲಯ ಅರಣ್ಯಾ ಧಿಕಾರಿ ಶರಣಪ್ಪ ಕುಂಬಾರ, ತಾಪಂ ವ್ಯವಸ್ಥಾಪಕ ಚಂದ್ರಶೇಖರ ಜೇವರ್ಗಿ, ಜಿಪಂ ಶಶಿಧರ ಹಿರೇಮಠ ಹಾಗೂ ಎಲ್ಲ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next