Advertisement

ಇಂದು ದೇವಿರಮ್ಮ ದರ್ಶನ: ಬೆಟ್ಟ ಹತ್ತಿದ ಸಿ ಟಿ ರವಿ

11:56 AM Oct 27, 2019 | keerthan |

ಚಿಕ್ಕಮಗಳೂರು :ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ದೇವಿರಮ್ಮ ಪುಣ್ಯ ಕ್ಷೇತ್ರಕ್ಕೆ ಜನ ಸಾಗರ ಹರಿದು ಬರುತ್ತಿದ್ದಾರೆ. ಸಮುದ್ರ ಮಟ್ಟದಿಂದ 4 ಸಾವಿರ ಎತ್ತರದಲ್ಲಿರೋ ಬೆಟ್ಟಕ್ಕೆ ರಾಜ್ಯದ ವಿವಿಧ ಮೂಲೆಗಳಿಂದ ಭಕ್ತರು ಆಗಮಿಸುತ್ತಿದ್ದು ಹಬ್ಬದ ವಾತಾವರಣ ಮನೆ ಮಾಡಿದೆ.

Advertisement

ಚಿಕ್ಕಮಗಳೂರು ತಾಲೂಕಿನ ಮಲ್ಲೆನಹಳ್ಳಿ ಗ್ರಾಮದ ಬಿಂಡಿಗ ದೇವಿರಮ್ಮ ಬೆಟ್ಟಕ್ಕೆ ಜಾರುವ ಕಾಲುದಾರಿಯಲ್ಲೇ ಭಕ್ತರು ಬೆಟ್ಟ ಹತ್ತಿ ದೇವಿ ದರ್ಶನ ಪಡೆಯುತ್ತಾರೆ.

ಸಚಿವ ಸಿ ಟಿ ರವಿ ಅವರು ಬರಿ ಕಾಲಿನಲ್ಲಿ ಬೆಟ್ಟ ಹತ್ತಿ ದೇವಿ ದರ್ಶನ ಪಡೆದರು. ಸಿ ಟಿ ರವಿಯವರು ಪ್ರತಿವರ್ಷ ದೇವಿ ದರ್ಶನ ಪಡೆಯುತ್ತಿದ್ದು, ಸಂಪ್ರದಾಯ ಮುಂದುವರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next