Advertisement

ಕೊಲ್ಲೂರು ಕ್ಷೇತ್ರದಲ್ಲಿ ದಾಖಲೆಯ ಭಕ್ತಸಮೂಹ: ಮೇ 2, 3 ರಂದು ಭಕ್ತರಿಗೆ ದರ್ಶನ ಇಲ್ಲ

12:11 AM Apr 25, 2023 | Team Udayavani |

ಕೊಲ್ಲೂರು: ಕಳೆದ ಒಂದು ತಿಂಗಳಿನಿಂದೀಚೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲಕ್ಕೆ ಆಗಮಿಸುವ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದ್ದು, ರವಿವಾರ ರಾತ್ರಿ ದಾಖಲೆ ಸಂಖ್ಯೆಯ 15 ಸಾವಿರಕ್ಕೂ ಮಿಕ್ಕಿ ಭಕ್ತರು ಆಗಮಿಸಿದ್ದರು.

Advertisement

ಕೆಲವು ದಿನಗಳಿಂದ ಪ್ರತೀ ದಿನ ಸರಾಸರಿ 15 ಸಾವಿರಕ್ಕೂ ಅಧಿಕ ಭಕ್ತರು ಆಗಮಿಸುತ್ತಾರೆ. ರವಿವಾರ ಮಧ್ಯಾಹ್ನದ ಅನ್ನಪ್ರಸಾದ ಸ್ವೀಕರಿಸಲು 9 ಸಾವಿರದಷ್ಟು ಭಕ್ತರು ಇದ್ದರೆ ರಾತ್ರಿ ವೇಳೆ 15 ಸಾವಿರ ಮಂದಿ ಕ್ಷೇತ್ರಕ್ಕೆ ಆಗಮಿಸಿದ್ದರು. ಕರ್ನಾಟಕ ಸಹಿತ ವಿವಿಧ ರಾಜ್ಯಗಳಿಂದ ಆಗಮಿಸಿದ ಭಕ್ತರಿಂದಾಗಿ ವಸತಿಗೃಹಗಳು ತುಂಬಿದ್ದರಿಂದ ದೇಗುಲದ ಹೊರಭಾಗ ಹಾಗೂ ಸನಿಹದ ಅರಣ್ಯದ ಅಂಚಿನಲ್ಲೂ ಜನರು ಆಶ್ರಯ ಪಡೆದಿರುವುದು ಕಂಡುಬಂತು.

21 ವರ್ಷಗಳ ಬಳಿಕ ಬ್ರಹ್ಮಕಲಶೋತ್ಸವ
ಎ. 30ರಿಂದ ಮೇ 11ರ ತನಕ ಕೊಲ್ಲೂರು ದೇಗುಲದಲ್ಲಿ ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಸಕಲ ಸಿದ್ಧತೆ ಭರದಿಂದ ಸಾಗುತ್ತಿದೆ. 1972 ರಲ್ಲಿ ಬ್ರಹ್ಮಕಲಶೋತ್ಸವ ನಡೆದಿತ್ತು. ಅನಂತರ 2002ರಲ್ಲಿ ನಡೆದಿದೆ. ಇದೀಗ 21 ವರುಷಗಳ ಅನಂತರ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಲಿದೆ.

ಎ. 30ರಿಂದ ಧಾರ್ಮಿಕ ವಿ ಧಿ ವಿಧಾನ ನಡೆಯಲಿವೆ. ಮೇ 1ರಂದು ಪೀಠ ಚಲನೆ, ಮೇ 4ರಂದು ಸಹಸ್ರ ಕಲಶ ಸ್ಥಾಪನೆ, ಮೇ 5ರಂದು ಸಹಸ್ರ ಕಲಶದೊಂದಿಗೆ ಬ್ರಹ್ಮಕಲಶಾಭಿಷೇಕ, ಮೇ 9ರಂದು ಬ್ರಹ್ಮರಥೋತ್ಸವ ಹಾಗೂ ಮೇ 11ರಂದು ಪೂರ್ಣ ಕುಂಭಾಭಿಷೇಕ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ ಹಾಗೂ ಕಾರ್ಯನಿರ್ವಹಣಾ ಕಾರಿ ಎಸ್‌.ಸಿ. ಕೊಟಾರಗಸ್ತಿ ತಿಳಿಸಿದ್ದಾರೆ.

ಮೇ 2, 3: ದರ್ಶನ ಇಲ್ಲ
ಬ್ರಹ್ಮಕಲಶೋತ್ಸವದ ಅಂಗವಾಗಿ ಪೀಠ ಚಲನೆ ಪ್ರಕ್ರಿಯೆ ನಡೆಯುವುದರಿಂದ ಮೇ 2 ಮತ್ತು 3ರಂದು ಭಕ್ತರಿಗೆ ಶ್ರೀ ದೇವಿಯ ದರ್ಶನಕ್ಕೆ ಅವಕಾಶವಿಲ್ಲ ಎಂದು ಕ್ಷೇತ್ರದ ಆಡಳಿತ ಮಂಡಳಿ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next