Advertisement
ಉಡುಪಿಯ ಎಸ್ಪಿ ಕಚೇರಿಯಲ್ಲಿ ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರವೀಣ್ ಸೂದ್ ಅವರು ಡ್ರಗ್ಸ್ ದಂಧೆ ಕುರಿತಾಗಿ ತೂರಿಬಂದ ಪ್ರಶ್ನೆಗಳಿಗೆ ಈ ರೀತಿಯಾಗಿ ಉತ್ತರಿಸಿದರು.
Related Articles
Advertisement
ನಮ್ಮ ರಾಜ್ಯಕ್ಕೆ ಮಾದಕ ವಸ್ತುಗಳು ಸಮುದ್ರಮಾರ್ಗ, ವಾಯು ಮಾರ್ಗ ಅಥವಾ ಭೂ ಮಾರ್ಗ ಹೀಗೆ ಎಲ್ಲಿಂದ ಬಂದರೂ ಮಟ್ಟ ಹಾಕುತ್ತೇವೆ.
ಸದ್ಯ ಕೋವಿಡ್ 19 ಕಾರಣದಿಂದ ಕಾಲೇಜುಗಳು ಬಂದ್ ಇವೆ. ಆದರೆ ಈಗಲೂ ಡ್ರಗ್ಸ್ ದಂಧೆ ನಡೆಯುತ್ತಿಲ್ಲ ಎಂದು ಹೇಳಲು ಸಾಧ್ಯವಿಲ್ಲ ಮತ್ತು ಈ ಕುರಿತಾಗಿ ಮುಖ್ಯಮಂತ್ರಿಗಳು ನಿನ್ನೆ ಸಭೆ ನಡೆಸಿ ಸೂಚನೆಯನ್ನೂ ಸಹ ನೀಡಿದ್ದಾರೆ ಎಂದು ಪ್ರವೀಣ್ ಸೂದ್ ಅವರು ಹೇಳಿದ್ದಾರೆ.
ಈ ಕಾರ್ಯಚರಣೆ ಕೇವಲ ಬೆಂಗಳೂರಿಗೆ ಸೀಮಿತವಾಗಬಾರದು ಮತ್ತು ಈಗಾಗಲೇ ಬೇರೆ ಕಡೆಯೂ ಕಾರ್ಯಾಚರಣೆ ನಡೆಸಲಾಗುತ್ತಿದೆ ಆದರೆ ಅವೆಲ್ಲಾ ಅಷ್ಟೊಂದು ಸುದ್ದಿಯಾಗಲ್ಲ ಎಂದು ಅವರು ಇನ್ನೊಂದು ಪ್ರಶ್ನೆಗೆ ಉತ್ತರಿಸುತ್ತಾ ನುಡಿದರು.
ಡ್ರಗ್ಸ್ ದಂಧೆಗೆ ಸಂಬಂಧಿಸಿದಂತೆ ಸೆಲೆಬ್ರಿಟಿಗಳ ಬಂಧನ ಇತ್ಯಾದಿ ವಿಚಾರಗಳನ್ನು ಬೆಂಗಳೂರು ಕಮಿಷನರ್ ಮಾತನಾಡುತ್ತಾರೆ. ಮತ್ತು ಇದೀಗ ತನಿಖೆ ಪ್ರಗತಿಯಲ್ಲಿರುವುದರಿಂದ ಓರ್ವ ಜವಾಬ್ದಾರಿಯುತ ಪೊಲೀಸ್ ಅಧಿಕಾರಿಯಾಗಿ ನಾನು ಮಾತನಾಡುವುದು ಸರಿಯಲ್ಲ, ಆದರೆ ರಾಜ್ಯದಲ್ಲಿ ಡ್ರಗ್ಸ್ ದಂಧೆಯನ್ನು ಮಟ್ಟ ಹಾಕಲು ರಾಜ್ಯ ಸರ್ಕಾರ ಪೊಲೀಸ್ ಇಲಾಖೆಗೆ ಮುಕ್ತ ಅವಕಾಶ ನೀಡಿದೆ ಎಂದು ಪ್ರವೀಣ್ ಸೂದ್ ಅವರು ಹೇಳಿದರು.