Advertisement

ದ.ಕ. 293, ಉಡುಪಿ 231ಮಂದಿಗೆ ಕೋವಿಡ್ ಸೋಂಕು ದೃಢ

09:28 AM Oct 05, 2020 | sudhir |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರವಿವಾರ 293 ಮಂದಿಗೆ ಕೊರೊನಾ ದೃಢಪಟ್ಟಿದೆ. ಇಬ್ಬರು ಸಾವನ್ನಪ್ಪಿದ್ದಾರೆ. ಕೊರೊನಾಕ್ಕೆ ಸಂಬಂಧಿಸಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 434 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಕೊರೊನಾದಿಂದ ಒಟ್ಟು 568 ಸಾವು ಸಂಭವಿಸಿದ್ದು 5,601 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement

ಕೊರೊನಾ ಪ್ರಕರಣವನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ದ.ಕ. ಜಿಲ್ಲಾ ಪಂಚಾಯತ್‌ ಸೋಮವಾರದಿಂದ ಪ್ರತಿ ಗ್ರಾ.ಪಂ. ಮಟ್ಟದಲ್ಲಿ ಕೊರೊನಾ ಪರೀಕ್ಷೆ ಹಮ್ಮಿಕೊಂಡಿದ್ದು, ರವಿವಾರ ದ.ಕ. ಜಿಲ್ಲೆಯಲ್ಲಿ 43 ಮಂದಿಗೆ ಕೊರೊನಾ ದೃಢಪಟ್ಟಿದೆ. ದ.ಕ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 4,784 ಮಾಸ್ಕ್ ಉಲ್ಲಂಘನೆ ಪ್ರಕರಣ ಪತ್ತೆಯಾಗಿದ್ದು, 5,75,159 ರೂ. ದಂಡ ವಸೂಲಿ ಮಾಡಲಾಗಿದೆ.

ಉಡುಪಿ: 231 ಪ್ರಕರಣ
ಉಡುಪಿ: ಉಡುಪಿ ಜಿಲ್ಲೆಯಲ್ಲಿ ರವಿವಾರ 231 ಜನರಿಗೆ ಕೊರೊನಾ ಪಾಸಿಟಿವ್‌ ವರದಿಯಾಗಿದೆ. 59 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 2,145 ಸಕ್ರಿಯ ಪ್ರಕರಣಗಳಿವೆ. ಇದು ವರೆಗೆ ಒಟ್ಟು 154 ಜನರು ನಿಧನ ಹೊಂದಿದ್ದಾರೆ.

ಕೊಡಗು: 115 ಪಾಸಿಟಿವ್‌
ಮಡಿಕೇರಿ : ಜಿಲ್ಲೆಯಲ್ಲಿ ರವಿವಾರ 115 ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಜಿಲ್ಲೆಯಲ್ಲಿನ ಒಟ್ಟು ಕೋವಿಡ್‌ಪ್ರಕರಣಗಳ ಸಂಖ್ಯೆ 3,1 15 ಆಗಿದ್ದು, 2,446 ಮಂದಿ ಗುಣಮುಖರಾಗಿದ್ದಾರೆ. 621 ಸಕ್ರಿಯ ಪ್ರಕರಣಗಳಿವೆ. ಒಟ್ಟು 48 ಸಾವು ಸಂಭವಿಸಿದೆ ಎಂದು ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ತಿಳಿಸಿದ್ದಾರೆ.

ಕಾಸರಗೋಡು: 278 ಪಾಸಿಟಿವ್‌
ಕಾಸರಗೋಡು: ಜಿಲ್ಲೆಯಲ್ಲಿ ರವಿವಾರ 278 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. 193 ಮಂದಿ ಗುಣಮುಖರಾಗಿದ್ದಾರೆ. 271 ಮಂದಿಗೆ ಸಂಪರ್ಕದ ಮೂಲಕ ತಗಲಿದೆ. ಕೇರಳದಲ್ಲಿ 8,553 ಪ್ರಕರಣ ಕೇರಳದಲ್ಲಿ ರವಿವಾರ 8,553 ಮಂದಿಗೆ ಸೋಂಕು ದೃಢಪಟ್ಟಿದೆ. 23 ಮಂದಿ ಮೃತಪಟ್ಟಿದ್ದಾರೆ.

Advertisement

ಲಾಠೀಪ್ರಹಾರ

ಕೋವಿಡ್‌ ವ್ಯಾಪಕವಾಗುತ್ತಿರುವ ಕಾರಣ ಜನರು ಸೇರುವುದನ್ನು ತಡೆಯಲು ನಿಷೇಧಾಜ್ಞೆ ಜಾರಿಗೊಳಿ
ಸಿದ್ದು, ಜಿಲ್ಲೆಯ ವಿವಿಧೆಡೆ ಗುಂಪು ಸೇರಿದ ಜನರನ್ನು ಪೊಲೀಸರು ಲಾಠೀಪ್ರಹಾರ ಮಾಡಿ ಚದುರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next