Advertisement

ಧರಂ ಪ್ರೀತಿ, ವಿಶ್ವಾಸಕ್ಕೆ ಹೆಸರುವಾಸಿಯಾದ ಅಜಾತಶತ್ರು; ಸಿಎಂ

04:41 PM Jul 27, 2017 | Team Udayavani |

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎನ್.ಧರಂಸಿಂಗ್(80ವರ್ಷ) ನಿಧನದಿಂದ ಪಕ್ಷಕ್ಕೆ ಹಾಗೂ ರಾಜ್ಯಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ. ಅವರು ಸ್ನೇಹ, ಪ್ರೀತಿ, ವಿಶ್ವಾಸಕ್ಕೆ ಹೆಸರುವಾಸಿಯಾಗುವ ಮೂಲಕ ಅಜಾತಶತ್ರುವಾಗಿದ್ದರು. ಅವರ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

Advertisement

ಸದಾಶಿವನಗರದ ನಿವಾಸಕ್ಕೆ ಭೇಟಿ ನೀಡಿ ಪಾರ್ಥಿವ ಶರೀರಕ್ಕೆ ಅಂತಿಮ ದರ್ಶನದ ನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅವರು ನಿಭಾಯಿಸದ ಇಲಾಖೆಗಳೇ ಇಲ್ಲ ಅಂದ್ರೆ ತಪ್ಪಿಲ್ಲ. ಸಾಮಾಜಿಕ ನ್ಯಾಯದ ಪರವಾಗಿದ್ದ ನಾಯಕ ಧರಂಸಿಂಗ್ ಎಂದು ಬಣ್ಣಿಸಿದರು.

ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ರಾಜ್ಯದಲ್ಲಿ ಪಕ್ಷವನ್ನು ಕಟ್ಟಿದ್ದಾರೆ. ಅವರಿಗೆ ಎಲ್ಲ ಪಕ್ಷದಲ್ಲೂ ಸ್ನೇಹಿತರಿದ್ದರು, ಗೌರವಿಸುತ್ತಿದ್ದರು ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next