Advertisement

Dharamsthala: ಬಾಹುಬಲಿ ಪ್ರತಿಷ್ಠೆಯ 42ನೇ ವರ್ಧಂತಿ

01:03 AM Feb 02, 2024 | Team Udayavani |

ಬೆಳ್ತಂಗಡಿ: ಧರ್ಮಸ್ಥಳದ ರತ್ನಗಿರಿಯಲ್ಲಿ ಭಗವಾನ್‌ ಬಾಹುಬಲಿ ಮೂರ್ತಿಯ ಪ್ರತಿಷ್ಠಾ ಮಹೋತ್ಸವದ 42ನೇ ವರ್ಧಂತ್ಯುತ್ಸವದ ಅಂಗವಾಗಿ ಗುರುವಾರ ತೋರಣ ಮುಹೂರ್ತ, ವಿಮಾನಶುದ್ಧಿ, ಶೋಡಷ ಕಲಶಾಭಿಷೇಕ, ಗುರುವಾರ ಸಂಜೆ 4 ಗಂಟೆಯಿಂದ ನಾಂದಿಮಂಗಲ ಮೊದಲಾದ ಧಾರ್ಮಿಕ ವಿಧಿ- ವಿಧಾನಗಳು ನಡೆದವು.

Advertisement

ಪೂಜ್ಯ ದಿವ್ಯಸಾಗರ ಮುನಿ ಮಹಾರಾಜರು, ಪೂಜ್ಯ ಆದಿಸಾಗರ ಮುನಿಮಹಾರಾಜರು, ಪೂಜ್ಯ ನಿರ್ದೋಷಸಾಗರ ಮುನಿ ಮಹಾರಾಜರು ಮತ್ತು ಕ್ಷುಲ್ಲಕ ನಿರ್ವಾಣಸಾಗರ ಮಹಾರಾಜರು ಉಪಸ್ಥಿತರಿದ್ದರು. ಹೇಮಾವತಿ ವೀ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್‌ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್‌ ಭಾಗವಹಿಸಿದರು.

ಇಂದು ಪಾದಾಭಿಷೇಕ
ಶುಕ್ರವಾರ ಬೆಳಗ್ಗೆ 8.30ರಿಂದ ಭವ್ಯಅಗ್ರೋದಕ ಮೆರವಣಿಗೆ ಬಳಿಕ ಭಗವಾನ್‌ ಬಾಹುಬಲಿ ಸ್ವಾಮಿಗೆ 216 ಕಲಶಗಳಿಂದ ಪಾದಾಭಿಷೇಕ ನಡೆಯಲಿದೆ. ಕಾರ್ಕಳ ಜೈನಮಠದ ಶ್ರೀ ಲಲಿತಕೀರ್ತಿಭಟ್ಟಾರಕ ಸ್ವಾಮೀಜಿ ಮಂಗಲ ಪ್ರವಚನ ನೀಡುವರು.

Advertisement

Udayavani is now on Telegram. Click here to join our channel and stay updated with the latest news.

Next