Advertisement
“ಧರ್ಮಸಂಸದ್’ ಯಶಸ್ಸಿಗೆ ಕಾರಣ ಕರ್ತರಾದವರಿಗೆ ಕೃತಜ್ಞತೆ ಸಲ್ಲಿಸುವ ಪ್ರಯಕ್ತ ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ಅವರು, ಅಯೋಧ್ಯೆಯಲ್ಲಿ ಮುಂದಿನ ಒಂದು ವರ್ಷದೊಳಗೆ ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭ ವಾಗಬೇಕು, ಗೋರಕ್ಷಣೆಗಾಗಿ ಕಾನೂನು ರೂಪಿಸಿ ಗೋವು ರಾಷ್ಟ್ರೀಯ ಸಂಪತ್ತು ಎಂದು ಪರಿಗಣಿಸಲ್ಪಡಬೇಕು, ಅಸ್ಪೃಶ್ಯತೆ ಸಂಪೂರ್ಣವಾಗಿ ದೂರವಾಗಬೇಕು, ಅಲ್ಪ ಸಂಖ್ಯಾಕರಿಗೆ ದೊರೆಯುವ ಸೌಲಭ್ಯಗಳು ಬಹುಸಂಖ್ಯಾಕರಿಗೂ ದೊರೆಯಬೇಕು, ದೇವಸ್ಥಾನಗಳು ಸರಕಾರಿ ಆಡಳಿತದಿಂದ ಮುಕ್ತವಾಗಿ ಸಂತರು, ಭಕ್ತರ ಕೈಗೆ ಸಿಗ ಬೇಕು, ದೇವಾಲಯಗಳ ಹಣ ಧಾರ್ಮಿಕ ಕಾರ್ಯಗಳಿಗೆ ಮಾತ್ರ ಬಳಸಲ್ಪಡಬೇಕು ಎಂಬ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಇದನ್ನು ಸರಕಾರಕ್ಕೆ ನೀಡಲಾಗುವುದು ಎಂದು ತಿಳಿಸಿದರು.
“ಧರ್ಮಸಂಸದ್’ ಸೇರಿದಂತೆ ನಮ್ಮೆಲ್ಲಾ ಚಟುವಟಿಕೆಗಳಿಗೆ ಪೇಜಾವರ ಶ್ರೀಗಳು ಪ್ರೇರಕ ಶಕ್ತಿಯಾಗಿದ್ದಾರೆ. ಕಾರ್ಯಕರ್ತರು ರೂಪಿಸಿದ “ಹಿಂದೂವೈಭವ ಪ್ರದರ್ಶಿನಿ’ ವೀಕ್ಷಣೆ ಮಾಡಲೇಬೇಕೆಂದು ನ. 26 ರಂದು (ಧರ್ಮಸಂಸದ್ ಕೊನೆಯ ದಿನ) ರಾತ್ರಿ 9.40ಕ್ಕೆ ಆಗಮಿಸಿ ಒಂದು ತಾಸು ವೀಕ್ಷಿಸಿದ್ದಾರೆ. ಇದು ಅವರು ನೀಡುತ್ತಿರುವ ಪ್ರೇರಣೆ, ಸ್ಫೂರ್ತಿಗೆ ಒಂದು ಉದಾಹರಣೆ ಎಂದು ಗೋಪಾಲ್ ಹೇಳಿದರು. ಪೊಲೀಸರು ಕೂಡ ಉತ್ತಮವಾಗಿ ಸಹಕರಿಸಿದ್ದಾರೆ. ದ.ಕ. ಜಿಲ್ಲೆಯಲ್ಲಿ ಅಲ್ಲಿನ ಪೊಲೀಸರು ಹಿಂದೂ ಕಾರ್ಯಕರ್ತರಿಗೆ ಬೈಕ್ರ್ಯಾಲಿ ಮಾಡಲು ಬಿಡಲಿಲ್ಲ. ಆದರೆ ಉಡುಪಿಯಲ್ಲಿ ಅವಕಾಶ ದೊರೆಯಿತು. ಭಜನಮಂಡಳಿ, ಉಡುಪಿ ನಾಗರಿಕರು, ಹೊಟೇಲುಗಳು ಸಹಿತ ಎಲ್ಲರೂ ವಿಶೇಷ ರೀತಿ ಯಲ್ಲಿ ಸಹಕರಿ ಸಿದ್ದಾರೆ. ಉಡುಪಿಯ ಓರ್ವ ವೃದ್ಧ ಮಹಿಳೆ “ಧರ್ಮ ಸಂಸದ್’ ಗಾಗಿ 6,000 ರೂ. ಧನ ಸಹಾಯ ನೀಡಿ ದ್ದಾರೆ. ಇಡೀ ಸಮಾಜ ನಮ್ಮ ಜತೆಗೆ ಸಹಕರಿ ಸಿದೆ ಎಂದು ಹೇಳಿದರು.
Related Articles
Advertisement
ವಿಹಿಂಪ ಪ್ರಾಂತಕಾರ್ಯದರ್ಶಿ ಟಿ.ಎ.ಪಿ. ಶೆಣೈ, ಜಿಲ್ಲಾಧ್ಯಕ್ಷ ವಿಲಾಸ್ ನಾಯಕ್, ನಗರಾಧ್ಯಕ್ಷ ಸಂತೋಷ್ ಸುವರ್ಣ ಬೊಳೆj ಉಪಸ್ಥಿತರಿದ್ದರು.
ತಡೆಯಲಾಗದ ಜನಪ್ರವಾಹಶೋಭಾಯಾತ್ರೆಯನ್ನು ನಿಗದಿತ ಸಮಯಕ್ಕಿಂತ 10 ನಿಮಿಷ ಮುಂಚಿತವಾಗಿ ಆರಂಭಿಸಲಾಯಿತು. ಜನಪ್ರವಾಹವನ್ನು ತಡೆಯಲು ಅಸಾಧ್ಯವಾದ ಕಾರಣ ಈ ರೀತಿ ಮಾಡುವುದು ಅನಿವಾರ್ಯವಾಯಿತು. ನಾವು ನಿರೀಕ್ಷೆ ಮಾಡಿರುವುದಕ್ಕಿಂತಲೂ ಹೆಚ್ಚಿನ ಹಿಂದೂ ಬಾಂಧವರು ಸ್ಪಂದಿಸಿದ್ದಾರೆ. ಸಂತರು ಕೂಡ ನಿರೀಕ್ಷಿತ ಸಂಖ್ಯೆಗಿಂತಲೂ ಹೆಚ್ಚಾಗಿ ಆಗಮಿಸಿ ಸಹಕರಿಸಿದ್ದಾರೆ ಎಂದು ಗೋಪಾಲ್ ತಿಳಿಸಿದರು. 24 ಗಂಟೆಗಳಲ್ಲಿ ಸುತ್ತೋಲೆ ವಾಪಸ್!
“ಹಿಂದೂ ವೈಭವ’ ಭಾರತೀಯ ಸಂಸ್ಕೃತಿಯನ್ನು ಪರಿಚಯಿಸುವ ಪ್ರದರ್ಶನವಾಗಿತ್ತೇ ಹೊರತು ನಿರ್ದಿಷ್ಟ ಧರ್ಮ, ಜಾತಿಯನ್ನು ಪ್ರತಿನಿಧಿಸುವಂತದ್ದಾಗಿರಲಿಲ್ಲ. ಆದರೆ ಮೊದಲು ಇದರ ವೀಕ್ಷಣೆಗೆ ಶಾಲಾ ವಿದ್ಯಾರ್ಥಿಗಳನ್ನು ಕಳುಹಿಸುವಂತೆ ಸುತ್ತೋಲೆ ಹೊರಡಿಸಿದ್ದ ಶಿಕ್ಷಣ ಇಲಾಖೆ 24 ಗಂಟೆಗಳಲ್ಲಿ ಅದನ್ನು ವಾಪಸ್ ತೆಗೆದುಕೊಂಡಿತು. ಆದರೂ ಅನೇಕ ಶಾಲೆಗಳ ಮುಖ್ಯಸ್ಥರು ವಿದ್ಯಾರ್ಥಿಗಳನ್ನು ಕರೆತಂದು ಅವರಿಗೆ ಅಪೂರ್ವ ವಸ್ತುಪ್ರದರ್ಶನ ತೋರಿಸಿ ಪುರಾತನ ವೈಭವ, ಸಂಸ್ಕೃತಿಯ ಜ್ಞಾನ ನೀಡಿದ್ದಾರೆ ಎಂದು ಪ್ರಾಂತ ಕಾರ್ಯಾಧ್ಯಕ್ಷ ಎಂ.ಬಿ. ಪುರಾಣಿಕ್ ಅವರು ತಿಳಿಸಿದರು.