Advertisement

ಧರ್ಮಸ್ಥಳ ಮೇಳದ ತಿರುಗಾಟ ಆರಂಭ: ಸಂಜೆ 7ರಿಂದ ರಾತ್ರಿ 12 ಗಂಟೆಯ ವರೆಗೆ ಪ್ರದರ್ಶನ

09:48 AM Nov 27, 2022 | Team Udayavani |

ಬೆಳ್ತಂಗಡಿ: ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾ ಪೋಷಿತ ಯಕ್ಷಗಾನ ಮಂಡಳಿಯ ಪ್ರಸಕ್ತ ವರ್ಷದ ತಿರುಗಾಟ ಶನಿವಾರ ಆರಂಭವಾಯಿತು.

Advertisement

ಈಗಾಗಲೇ ಧರ್ಮಸ್ಥಳದಲ್ಲಿ ಸೇವಾಕರ್ತರ ವತಿಯಿಂದ ಕೆಲವು ಹರಕೆ ಬಯಲಾಟಗಳು ಪ್ರದರ್ಶನ ಗೊಂಡಿದ್ದು ಮುಂದೆ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರತೀ ದಿನ ಸಂಜೆ 7ರಿಂದ ರಾತ್ರಿ 12 ಗಂಟೆಯ ವರೆಗೆ ಪ್ರದರ್ಶನ ನಡೆಯಲಿದೆ. 2023ರ ಮೇ 23ರ ವರೆಗೆ ಪ್ರದರ್ಶನದ ಬಳಿಕ 3 ದಿನ ಧರ್ಮಸ್ಥಳದಲ್ಲಿ ಸೇವಾ ಬಯಲಾಟದೊಂದಿಗೆ ತಿರುಗಾಟ ಕೊನೆಗೊಳ್ಳುತ್ತದೆ.

ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ವೀ. ಹೆಗ್ಗಡೆ, ಡಿ. ಹಷೇìಂದ್ರ ಕುಮಾರ್‌ ಹಾಗೂ ಸುಪ್ರಿಯಾ ಎಚ್‌. ಕುಮಾರ್‌ ಉಪಸ್ಥಿತರಿದ್ದರು.

ಇದನ್ನೂ ಓದಿ: ಉಡುಪಿ ಕೃಷ್ಣ ಮಠದ ಪರಿಸರಕ್ಕೂ ಬಂದಿದ್ದನಂತೆ ಉಗ್ರ ಶಾರೀಕ್‌!

Advertisement

Udayavani is now on Telegram. Click here to join our channel and stay updated with the latest news.

Next