Advertisement

ಧರ್ಮಸ್ಥಳ: ಇಂದು 46ನೇ ವರ್ಷದ ಉಚಿತ ಸಾಮೂಹಿಕ ವಿವಾಹ

11:33 AM May 04, 2017 | Team Udayavani |

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಮೇ 4ರಂದು ಸಂಜೆ 6.50ಕ್ಕೆ ಅಮೃತವರ್ಷಿಣಿ ಸಭಾಭವನದಲ್ಲಿ 46ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದ್ದು, ಭರದಿಂದ ಸಿದ್ಧತೆಗಳು ನಡೆಯುತ್ತಿವೆ. ಈಗಾಗಲೇ 110 ಜೊತೆ ವಧು-ವರರು ಹೆಸರು ನೋಂದಾಯಿಸಿದ್ದಾರೆ. ಅವರು ನೀಡಿರುವ ಮಾಹಿತಿ ಹಾಗೂ ಪ್ರಮಾಣ ಪತ್ರ ಪರಿಶೀಲಿಸಿದ ಬಳಿಕ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಮದುವೆಯಾಗಲು ಅವರಿಗೆ ಅನುಮತಿ ನೀಡಲಾಗುವುದು.

Advertisement

ಸಿ.ಐ.ಡಿ. ಘಟಕದ ಡೈರೆಕ್ಟರ್‌ ಜನರಲ್‌ ಆಫ್‌ ಪೊಲೀಸ್‌ ಕಿಶೋರ್‌ಚಂದ್ರ, ಶಾಸಕ ಕೆ. ವಸಂತ ಬಂಗೇರ, ಚಲನಚಿತ್ರ ಕಲಾವಿದರಾದ ಯಶ್‌ ಮತ್ತು ರಾಧಿಕಾ ಪಂಡಿತ್‌, ಕೋಲ್ಕತ್ತಾದ ಬಿರ್ಲಾ ನಿಗಮದ ಕಾರ್ಯನಿರ್ವಾಹಕ ಅಧ್ಯಕ್ಷ ಸಂದೀಪ್‌ರಂಜನ್‌ ಘೋಷ್‌ ಮತ್ತು ಬೆಳಗಾವಿಯ ದಕ್ಷಿಣ ಭಾರತ ಜೈನ ಸಭಾದ ಅಧ್ಯಕ್ಷ ರಾವ್‌ ಸಾಹೇಬ್‌ ಅಣ್ಣಾ ಸಾಹೇಬ್‌ ಪಾಟೀಲ್‌ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭಾಶಂಸನೆ ಮಾಡುವರು. ವರದಕ್ಷಿಣೆ ಹಾಗೂ ವಿವಾಹದ ದುಂದುವೆಚ್ಚ ತಡೆಯುವ ಉದ್ದೇಶದಿಂದ ಡಿ. ವೀರೇಂದ್ರ ಹೆಗ್ಗಡೆ 1972ರಲ್ಲಿ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ ಪ್ರಾರಂಭಿಸಿದ್ದು, ಪ್ರತಿವರ್ಷ ಈ ಕಾರ್ಯಕ್ರಮ ನಡೆಯುತ್ತದೆ. 

Advertisement

Udayavani is now on Telegram. Click here to join our channel and stay updated with the latest news.

Next