Advertisement

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಭಕ್ತರ ದಟ್ಟಣೆ

01:08 AM Mar 03, 2022 | Team Udayavani |

ಸುಬ್ರಹ್ಮಣ್ಯ: ಮಹಾಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ್ದ ಹೆಚ್ಚಿನ ಭಕ್ತರು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೂ ಬಂದಿದ್ದು, ಮಂಗಳವಾರ ಮತ್ತು ಬುಧವಾರ ಕ್ಷೇತ್ರದಲ್ಲಿ ಭಕ್ತರ ದಟ್ಟಣೆ ಕಂಡುಬಂದಿತು.

Advertisement

ಮಂಗಳವಾರವೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿ ಸಿದ್ದರು. ಬುಧವಾರವಂತೂ ಪೇಟೆ, ರಥಬೀದಿ ಹಾಗೂ ಕುಮಾರಧಾರಾ ಸ್ನಾನಘಟ್ಟದಲ್ಲಿ ಜನಸಂದಣಿ ಹೆಚ್ಚಿತ್ತು. ವಾಹನ ನಿಲುಗಡೆ ಪ್ರದೇಶ, ವಸತಿ ಗೃಹಗಳು ಭರ್ತಿಯಾಗಿದ್ದವು. ಲಗೇಜ್‌ ಕೊಠಡಿಯೂ ಭರ್ತಿಯಾಗಿದ್ದು, ಭಕ್ತರು ತಮ್ಮ ಚೀಲಗಳನ್ನು ಕೊಠಡಿಯ ಹೊರಭಾಗದಲ್ಲೇ ಇಡ ಬೇಕಾದ ಪರಿಸ್ಥಿತಿ ಇತ್ತು. ಸರದಿ ಸಾಲುಗಳಲ್ಲಿ ನಿಲ್ಲಲು ಸಾಧ್ಯವಾಗದ ಭಕ್ತರು ಆಡಳಿತ ಕಚೇರಿ ಬಳಿ ನೆರಳಿನಲ್ಲಿ ಕುಳಿತಿರುವುದು ಕಂಡುಬಂತು.

ಬುಧವಾರ ಬೆಳಗ್ಗೆ 10 ಗಂಟೆಯಿಂದಲೇ ಭೋಜನ ಪ್ರಸಾದ ವಿತರಣೆ ಆರಂಭಿಸಲಾಯಿತು.

 

Advertisement

Udayavani is now on Telegram. Click here to join our channel and stay updated with the latest news.

Next