Advertisement

ಇಂದಿನಿಂದ ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

01:45 AM Nov 22, 2019 | mahesh |

ಬೆಳ್ತಂಗಡಿ: ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಸಂಭ್ರಮಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ಸಜ್ಜುಗೊಂಡಿದೆ. ನಾಡಿನ ಪವಿತ್ರ ಕ್ಷೇತ್ರ ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ನ. 22ರಿಂದ 26ರ ವರೆಗೆ ನಡೆಯಲಿರುವ ದೀಪೋತ್ಸವದಲ್ಲಿ ಸಾವಿರಾರು ಮಂದಿ ಭಾಗವಹಿಸಲಿದ್ದಾರೆ.

Advertisement

ಈಗಾಗಲೇ ದೇವಸ್ಥಾನ, ಬೀಡು, ರಸ್ತೆಗಳು, ವಸತಿಗೃಹ ಸಹಿತ ರಸ್ತೆಗಳು, ಸುತ್ತಮುತ್ತಲಿನ ಕಟ್ಟಡಗಳು ವಿದ್ಯುದ್ದೀಪಗಳಿಂದ ಅಲಂಕಾರಗೊಂಡು, ಸಾಲು ಸಾಲು ವಿಭಿನ್ನ ಮಳಿಗೆಗಳಿಂದ ಜನಾಕರ್ಷಣೆ ಪಡೆದಿದೆ.
ನೇತ್ರಾವತಿ ಸ್ನಾನಘಟ್ಟದಿಂದ ಮುಖ್ಯ ದ್ವಾರದವರೆಗೆ ವಿದ್ಯುದ್ದೀಪಗಳು, ರಸ್ತೆ ಕೆರೆಗಳಲ್ಲಿ ಆಲಂಕಾರಿಕ ವಸ್ತುಗಳನ್ನು ಜೋಡಿಸಲಾಗಿದೆ. ಮುಖ್ಯದ್ವಾರ ಸಹಿತ ದೇವಸ್ಥಾನದ ಸಮೀಪದವರೆಗೂ ಸಾಲು ಸಾಲು ವಿವಿಧ ಬಗೆಯ ತಿಂಡಿ-ತಿನಿಸು, ಬಟ್ಟೆಬರೆಗಳು, ಕಾಫಿ – ಟೀ ಸ್ಟಾಲ್‌ ಮಳಿಗೆ ಗಳು ಭಕ್ತರನ್ನು ಸೆಳೆಯುವಂತಿದೆ.

ಧರ್ಮಸ್ಥಳ ಪ್ರೌಢಶಾಲೆ ಮುಂಭಾಗದ ಆವರಣದಲ್ಲಿ ರಾಷ್ಟ್ರಮಟ್ಟದ 42ನೇ ವಸ್ತುಪ್ರದರ್ಶನ ಮಳಿಗೆಗಳು ಸಜ್ಜು ಗೊಂಡಿವೆ. ಲಕ್ಷ ದೀಪೋತ್ಸವ ಪ್ರಯುಕ್ತ ಸಾವಿರಾರು ಸ್ವಚ್ಛತಾ ಸೇನಾನಿಗಳು ಕ್ಷೇತ್ರದ ಸ್ವತ್ಛತೆ ಕಾಪಾಡುವಲ್ಲಿ ಮಹತ್ತರ ಪಾತ್ರ ವಹಿಸಿದ್ದಾರೆ. ದೇವಸ್ಥಾನದ ಮುಂಭಾಗ ವಿವಿಧ ವಿನ್ಯಾಸವನ್ನು ಒಳಗೊಂಡಿರುವ ವಿದ್ಯುದ್ದೀಪಗಳನ್ನು ಜೋಡಿಸಲಾಗಿದೆ. ಗೂಡುದೀಪಾಕೃತಿಯ ಬಣ್ಣ ಬಣ್ಣದ ಬಲುºಗಳು ಮನಮೋಹಕವಾಗಿವೆ. ನಾಡಿನೆಲ್ಲೆಡೆಯಿಂದ ಬರುವ ಭಕ್ತರ ಸೇವೆಗಾಗಿ ಕ್ಷೇತ್ರದ ಸಿಬಂದಿ ಪೊಲೀಸರು, ವಿದ್ಯಾರ್ಥಿಗಳು, ಸ್ವತ್ಛತಾ ಸೇನಾನಿಗಳು, ಸ್ವಯಂ ಸೇವಕರು, ಗೃಹರಕ್ಷಕ ದಳ ಸರ್ವ ರೀತಿಯಲ್ಲಿ ತಯಾರಿ ನಡೆಸಿದೆ.

ಲಕ್ಷದೀಪೋತ್ಸವ ಸಂಭ್ರಮ ಕಣ್ತುಂಬಿಕೊಳ್ಳಲು ರಾಜ್ಯದ ವಿವಿಧ ಕಡೆಗಳಿಂದ ಬರುವ ಭಕ್ತರನ್ನು ಕರೆತರಲು ಕೆಎಸ್‌ಆರ್‌ಟಿಸಿ ಬಸ್‌ಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಶುಕ್ರವಾರ ಅಪರಾಹ್ನ 3 ಗಂಟೆಗೆ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಿಂದ ಧರ್ಮಸ್ಥಳಕ್ಕೆ ಸಾವಿರಾರು ಮಂದಿ ಪಾದಯಾತ್ರಿಗಳು ಆಗಮಿಸಲಿದ್ದಾರೆ.

197 ಮಳಿಗೆಗಳು
ರಾಜ್ಯಮಟ್ಟದ 42ನೇ ವಸ್ತುಪ್ರದರ್ಶನದಲ್ಲಿ ಜ್ಞಾನ-ವಿಜ್ಞಾನ ಸಮ್ಮಿಳಿತದ 197 ವಿವಿಧ ಪ್ರಕಾರದ ಮಳಿಗೆಗಳು ಆಕರ್ಷಿಸಲಿವೆ. ಸರಕಾರಿ ಮಳಿಗೆಗಳು, ಎಲೆಕ್ಟ್ರಾನಿಕ್‌ ವಸ್ತುಗಳು, ಪುಸ್ತಕ ಮಳಿಗೆ, ಸಿರಿ ಉತ್ಪನ್ನಗಳು, ತರಕಾರಿ ಬೀಜಗಳು, ರುಡ್ಸೆಟ್‌ ಮಳಿಗೆ, ಎಸ್‌ಕೆಡಿಆರ್‌ ಡಿಪಿ ಮಳಿಗೆ, ಕೃಷಿ ಉಪಕರಣಗಳು, ನಾಟಿ ಔಷಧ, ಕರಕುಶಲ ವಸ್ತು, ಗೋಬರ್‌ ಗ್ಯಾಸ್‌, ವಸ್ತ್ರ ಮಳಿಗೆಗಳು, ವಾಹನ ಮಳಿಗೆ, ನೀರು ಶುದ್ಧೀಕರಣ ಸಹಿತ ವಿವಿಧ ಬಗೆಯ ಮಳಿಗೆಗಳು ಸಿದ್ಧಗೊಂಡಿವೆ.

Advertisement

ಸರ್ವಸಿದ್ಧತೆ
ಲಕ್ಷದೀಪೋತ್ಸವ ಸಂದರ್ಭ ಬರುವ ಭಕ್ತರಿಗೆ ಊಟದ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಇತ್ಯಾದಿಗಳ ಸಿದ್ಧತೆ ಪೂರ್ಣಗೊಳಿಸಲಾಗಿದೆ. ಸ್ವತ್ಛತಾ ಸೇನಾನಿಗಳು ಬದ್ಧತೆಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಭಕ್ತರಿಗೆ ಯಾವುದೇ ಕೊರತೆ ಬಾರದ
ರೀತಿಯಲ್ಲಿ ಸಿದ್ಧಗೊಳಿಸಲಾಗಿದೆ.
– ಹರ್ಷೇಂದ್ರ ಕುಮಾರ್‌, ಶ್ರೀಕ್ಷೇತ್ರ ಧರ್ಮಸ್ಥಳದ ಆಡಳಿತ ಮೇಲುಸ್ತುವಾರಿ

Advertisement

Udayavani is now on Telegram. Click here to join our channel and stay updated with the latest news.

Next