Advertisement

ಧರ್ಮಸ್ಥಳ ಕಾರ್ಯಕ್ರಮಕ್ಕೆ ಗೈರು: ಮುಖ್ಯಮಂತ್ರಿ ವಿಷಾದ

06:15 AM Oct 25, 2018 | Team Udayavani |

ಬೆಂಗಳೂರು: ಅನಾರೋಗ್ಯ ಹಿನ್ನೆಲೆಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಪಟ್ಟಾಭಿಷೇಕ ಮಹೋತ್ಸವದ 51 ನೇ ವರ್ಷಾಚರಣೆ ಸಮಾರಂಭಕ್ಕೆ ಹಾಜರಾಗಲು ಸಾಧ್ಯವಾಗಲಿಲ್ಲ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

Advertisement

ಧಾರ್ಮಿಕ ಕ್ಷೇತ್ರವೊಂದು ಶಿಕ್ಷಣ, ಗ್ರಾಮೀಣಾಭಿವೃದ್ಧಿ, ಮಹಿಳಾ ಸಬಲೀಕರಣ, ಕೃಷಿ, ಸಂಸ್ಕೃತಿ ರಕ್ಷಣೆಯಂತಹ ಸಮಾಜಮುಖೀ ಕಾರ್ಯಗಳಲ್ಲಿ  ಪರಿಣಾಮಕಾರಿಯಾಗಿ ತೊಡಗಿಸಿಕೊಂಡಿರುವುದಕ್ಕೆ  ಶ್ರೀಕ್ಷೇತ್ರ ಧರ್ಮಸ್ಥಲ ಅತ್ಯುತ್ತಮ ನಿದರ್ಶನ. ಬುಧವಾರ ಉದ್ಘಾಟಿಸಬೇಕಿದ್ದ ಮಂಜೂಷಾ ವಸ್ತು ಸಂಗ್ರಹಾಲಯವೂ ಸಮಾಜಕ್ಕೆ ಮಹತ್ತರ ಕೊಡುಗೆಯಾಗಿದೆ. ಡಾ.ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ಮಹೋತ್ಸವದ ವಾರ್ಷಿಕೋತ್ಸವ ಸಂದರ್ಭದಲ್ಲಿ ಅವರ ಸಮಾಜಮುಖೀ ಚಟುವಟಿಕೆಗಳ ವ್ಯಾಪ್ತಿ ಇನ್ನಷ್ಟು ವಿಸ್ತರಿಸಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.

ಜಗತ್ತಿಗೆ ರಾಮಾಯಣ ಮಹಾಕಾವ್ಯದ ಕೊಡುಗೆ ನೀಡಿದ ಆದಿಕವಿ ವಾಲ್ಮೀಕಿ  ಮಹರ್ಷಿಗಳ ಜಯಂತಿ ಸಮಾರಂಭದಲ್ಲೂ ನಾನು ಪಾಲ್ಗೊಳ್ಳಲು ಆಗಲಿಲ್ಲ. ಎರಡೂ ಕಾರ್ಯಕ್ರಮಗಳಲ್ಲಿ ಆನಾರೋಗ್ಯ ನಿಮಿತ್ತ ಅನಿವಾರ್ಯ ಕಾರಣದಿಂದ ಭಾಗವಹಿಸಲು ಸಾಧ್ಯವಾಗಲಿಲ್ಲ. ಇದಕ್ಕಾಗಿ ವಿಷಾದಿಸುತ್ತೇನೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next