Advertisement

ಧಾರವಾಡ ಕಟ್ಟಡ ಕುಸಿತ: ಏರುತ್ತಿದೆ ಸಾವಿನ ಸಂಖ್ಯೆ

06:31 AM Mar 22, 2019 | Team Udayavani |

ಧಾರವಾಡ: ನಿರ್ಮಾಣ ಹಂತದಲ್ಲಿದ್ದ ಬಹುಮಹಡಿ ಕಟ್ಟಡ ಕುಸಿದು ಬಿದ್ದ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿದೆ. ಇನ್ನೂ ಹಲವರು ಅವಶೇಷದ ಒಳಗೆ ಸಿಲುಕಿದ್ದಾರೆ ಎಂದು ತಿಳಿದು ಬಂದಿದೆ.

Advertisement

ಕುಮಾರೇಶ್ವರ ನಗರದಲ್ಲಿ ಮಂಗಳವಾರ ನಿರ್ಮಾಣ ಹಂತದಲ್ಲಿದ್ದ ಐದು ಮಹಡಿಯ ಕಟ್ಟಡ ಸಂಪೂರ್ಣ ಧರಾಶಾಯಿಯಾಗಿದ್ದು, ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. 

ಇದುವರೆಗೆ 56 ಜನರನ್ನು ಕಟ್ಟಡದ ಅವಶೇಷಗಳ ಅಡಿಯಿಂದ ರಕ್ಷಣೆ ಮಾಡಲಾಗಿದೆ. 400ಕ್ಕೂ ಹೆಚ್ಚಿನ ಎನ್ ಡಿಆರ್ ಎಫ್, ಎಸ್ ಡಿಆರ್ ಎಫ್, ಅಗ್ನಿಶಾಮಕ ದಳ ಸಿಬ್ಬಂದಿಗಳು ನಿರಂತರ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಅತ್ಯಾಧುನಿಕ ಉಪಕರಣಗಳನ್ನು ಉಪಯೋಗಿಸಿ ರಕ್ಷಣಾ ಕಾರ್ಯ ನಡೆಯುತ್ತಿದೆ. 

Advertisement

Udayavani is now on Telegram. Click here to join our channel and stay updated with the latest news.

Next