Advertisement

Dharwad: ಖಾಸಗಿ ಬಸ್‌ನಲ್ಲಿ 77 ಲಕ್ಷ ರೂ.ಮೌಲ್ಯದ ಚಿನ್ನಾಭರಣ ಜಪ್ತಿ

07:22 PM Oct 03, 2024 | Team Udayavani |

ಧಾರವಾಡ : ಖಾಸಗಿ ಸಾರಿಗೆ ಬಸ್ಸಿನಲ್ಲಿ ಸೂಕ್ತ ದಾಖಲೆ ಇಲ್ಲದೆ ಸಾಕಾಟ ಮಾಡುತ್ತಿದ್ದ 77 ಲಕ್ಷ ರೂ.ಮೌಲ್ಯದ ಚಿನ್ನ-ಬೆಳ್ಳಿ ಆಭರಣಗಳನ್ನು ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Advertisement

ಮುಂಬಯಿಂದ ಹುಬ್ಬಳ್ಳಿ ಕಡೆಗೆ ಖಾಸಗಿ ಬಸ್ಸಿನಲ್ಲಿ ಪ್ರಯಾಣ ಬೆಳೆಸಿದ್ದ ವ್ಯಕ್ತಿಯೊಬ್ಬ ಎರಡು ಬ್ಯಾಗ್‌ಗಳಲ್ಲಿ ಚಿನ್ನ ಹಾಗೂ ಬೆಳ್ಳಿ ಆಭರಣ ತೆಗೆದುಕೊಂಡು ಪ್ರಯಾಣ ಬೆಳೆಸಿದ್ದ. ಈ ಬಗ್ಗೆ ಮಾಹಿತಿ ಪಡೆದ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ರಾಷ್ಟ್ರೀಯ ಹೆದ್ದಾರಿಯ ನರೇಂದ್ರ ಕ್ರಾಸ್ ಬಳಿ ತಡೆದು ತಪಾಸಣೆ ಮಾಡಿದ್ದಾರೆ. ಈ ತಪಾಸಣೆಯಲ್ಲಿ ಭವರಸಿಂಗ್ ಎಂಬ ವ್ಯಕ್ತಿಯ ಬ್ಯಾಗ್‌ನಲ್ಲಿ 77 ಲಕ್ಷಮೌಲ್ಯದ ಚಿನ್ನ-ಬೆಳ್ಳಿ ಆಭರಣಗಳು ಪತ್ತೆಯಾಗಿದೆ. ಕೊನೆಗೆ ಸ್ಥಳದಲ್ಲಿಯೇ ಚಿನ್ನಾಭರಣಗಳ ಪಂಚನಾಮೆ ನಡೆಸಲಾಯಿತು. ಈ ಬಗ್ಗೆ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಮುಂಬನಿಂದ ಖಾಸಗಿ ಬಸ್‌ನಲ್ಲಿ ಅಧಿಕ ಮೊತ್ತದ ಚಿನ್ನಾಭರಣ ಸಾಗಾಟವಾಗುತ್ತಿರುವ ಬಗ್ಗೆ ಮಾಹಿತಿ ಇತ್ತು. ತಪಾಸಣೆ ನಡೆಸಿ ಜಪ್ತಿ ಮಾಡಿದ್ದು, ದಾಖಲೆಗಳನ್ನು ಪರಿಶೀಲಿಸಲಾಗುವುದು.
-ಡಾ.ಗೋಪಾಲಕೃಷ್ಣ ಬ್ಯಾಕೋಡ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ.

Advertisement

Udayavani is now on Telegram. Click here to join our channel and stay updated with the latest news.

Next