Advertisement

Dharwad; ಹಣಕ್ಕಾಗಿ ತಾಯಿಯನ್ನು ಕೊಂದ ಬಳಿಕ ತಾನೂ ಆತ್ಮಹತ್ಯೆಗೆ ಶರಣಾದ ಮಗ

09:28 PM Mar 03, 2024 | Team Udayavani |

ಧಾರವಾಡ : ಹೆತ್ತ ತಾಯಿಯನ್ನೇ ಹತ್ಯೆಗೈದ ಮಗ ಬಳಿಕ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಹೊಸಯಲ್ಲಾಪುರದ ಉಡುಪಿ ಓಣಿಯಲ್ಲಿ ನಡೆದಿದೆ.

Advertisement

ಶಾರದಾ ಭಜಂತ್ರಿ (60) ಕೊಲೆಯಾದ ಮಹಿಳೆಯಾಗಿದ್ದು, ಪುತ್ರ ರಾಜೇಂದ್ರ ಭಜಂತ್ರಿ (40) ಕೊಲೆ ಮಾಡಿ, ಆತ್ಮಹತ್ಯೆಗೆ ಶರಣಾದವನು. ಕೆಲ ದಿನಗಳಿಂದ ಮಾನಸಿಕ ಸ್ಥಿರತೆ ಕಳೆದುಕೊಂಡಿದ್ದ ರಾಜೇಂದ್ರ ತಾಯಿ ಶಾರದಾ ಅವರೊಂದಿಗೆ ಜಗಳವಾಡುತ್ತಿದ್ದ. ತಾಯಿ ಬಳಿಯ ಹಣ ಹಾಗೂ ನಿವೇಶನಕ್ಕಾಗಿ ಆಗಾಗ ಪೀಡಿಸುತ್ತಿದ್ದಲ್ಲದೇ ಈ ಕುರಿತಂತೆ ಸಾಕಷ್ಟು ಗಲಾಟೆಗಳು ನಡೆದಿದ್ದವು.

ರವಿವಾರ ರಾಜೇಂದ್ರನ ಪತ್ನಿ ಊರಿಗೆ ಹೋಗಿದ್ದು, ಈ ಸಮಯದಲ್ಲಿ ಮನೆಯಲ್ಲಿ ಅಡುಗೆ ಮಾಡಿ ಕೊಡುವಂತೆ ತಾಯಿಯನ್ನು ಮನೆಗೆ ಕರೆದುಕೊಂಡು ಬಂದಿದ್ದಾನೆ. ಈ ವೇಳೆ ಮತ್ತೆ ಹಣ, ನಿವೇಶನಕ್ಕಾಗಿ ಜಗಳವಾಡಿದ್ದು, ವಿಕೋಪಕ್ಕೆ ತಿರುಗಿದ ಪರಿಣಾಮ ರಾಡ್‌ನಿಂದ ಹೆತ್ತ ತಾಯಿಗೆ ಹೊಡೆದು ಕೊಲೆ ಮಾಡಿದ ಬಳಿಕ ತಾನೂ ಕೂಡ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next