Advertisement

Dharwad: ರಸ್ತೆ ದುರಸ್ತಿ ವೇಳೆ ರಾಮ,ಲಕ್ಷ್ಮಣ ಇರುವ ವೀರಗಲ್ಲು ಪತ್ತೆ!

07:59 PM Jan 19, 2024 | Team Udayavani |

ಧಾರವಾಡ: ಅಯೋಧ್ಯೆಯಲ್ಲಿ ಜ.22 ರಂದು ಶ್ರೀರಾಮ ಮಂದಿರ ಉದ್ಘಾಟನೆಗೊಳ್ಳಲು ಎರಡೇ ದಿನ ಬಾಕಿ ಉಳಿದಿದೆ. ಇದೇ ಸಂದರ್ಭದಲ್ಲಿ ಸಮೀಪದ ಕಲಿಕೇರಿ ಗ್ರಾಮದ ವೀರಗಲ್ಲಿನಲ್ಲಿ ಶ್ರೀರಾಮ ಮತ್ತು ಲಕ್ಷ್ಮಣರಂತೆ ಬಿಲ್ಲು ಹಿಡಿದಿರುವ ವೀರಗಲ್ಲೊಂದು ಪತ್ತೆಯಾಗಿದೆ.

Advertisement

ಗ್ರಾಮದ ಹೊರಭಾಗದಲ್ಲಿ ಕೆರೆಯ ದಂಡೆಯಲ್ಲಿ ಈ ಕಲ್ಲು ಪಾಳು ಜಾಗದಲ್ಲಿ ಬಿದ್ದಿತ್ತು. ಗ್ರಾಮಸ್ಥರು ಜೆಸಿಬಿ ಮೂಲಕ ಕಚ್ಚಾ ರಸ್ತೆ ದುರಸ್ತಿ ನಡೆಸುತ್ತಿದ್ದಾಗ ದೊಡ್ಡ ಕಲ್ಲು ಪತ್ತೆಯಾಗಿದೆ. ಈ ಕಲ್ಲಿನಲ್ಲಿ ರಾಮ, ಸೀತೆ, ಲಕ್ಷ್ಮಣ, ಆಂಜನೇಯ ರೂಪಗಳಿವೆ.

ಇದಲ್ಲದೇ ಮೇಲ್ಭಾಗದಲ್ಲಿ ಶಿವಪಾರ್ವತಿ ಕೆತ್ತನೆ, ಕೆಳಭಾಗದಲ್ಲಿ ಶ್ರೀರಾಮನ ಕೆತ್ತನೆಯಿದೆ. ವಿಗ್ರಹ ಕಂಡು ಅಚ್ಚರಿಗೊಂಡ ಸ್ಥಳೀಯರು ವಿಗ್ರಹಕ್ಕೆ ಪೂಜೆ ಸಲ್ಲಿಸಿದ್ದಲ್ಲದೇ, ಜ.22 ರಂದು ಸೋಮವಾರ ಕಲಿಕೇರಿ ಗ್ರಾಮದಲ್ಲಿಯೇ ಈ ವಿಗ್ರಹವನ್ನು ಪ್ರತಿಷ್ಠಾಪನೆ ಮಾಡಲು ನಿರ್ಧರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next