Advertisement

ಅಭಿಮಾನಿ ಕುಟುಂಬಕ್ಕೆ ಆಸರೆಯಾದ ಧ್ರುವ

03:51 PM Feb 19, 2023 | Team Udayavani |

ಕೆಲ ದಿನಗಳ ಹಿಂದಷ್ಟೇ ನಟ ಧ್ರುವ ಸರ್ಜಾ ಅಭಿಮಾನಿ ಪೃಥ್ವಿರಾಜ್‌ ಎಂಬುವವರು ದ್ವಿಚಕ್ರ ವಾಹನ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಕೋಮಾ ಸ್ಥಿತಿ ತಲುಪಿದ್ದಾರೆ. ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಾಯಾಳುವಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಜೀವನ್ಮರಣದ ನಡುವೆ ಹೋರಾಡುತ್ತಿದ್ದಾರೆ. ಇದೇ ವೇಳೆ ಆಸ್ಪತ್ರೆಗೆ ಭೇಟಿ ನೀಡಿದ ನಟ ಧ್ರುವ ಸರ್ಜಾ, ಆಸ್ಪತ್ರೆಗೆ ಭೇಟಿ ನೀಡಿ ಅಭಿಮಾನಿಯ ಕುಟುಂಬಕ್ಕೆ ಧೈರ್ಯ ತುಂಬಿದ್ದಾರೆ.

Advertisement

ಅಲ್ಲದೆ ಸಾಲ ಮಾಡಿ ಪೃಥ್ವಿರಾಜ್‌ ಕುಟುಂಬ ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ಇದನ್ನು ತಿಳಿದ ಧ್ರುವ ಸರ್ಜಾ ಅಭಿಮಾನಿಯ ಕುಟುಂಬಕ್ಕೆ 5 ಲಕ್ಷ ಧನ ಸಹಾಯ ಮಾಡುವ ಮೂಲಕ ಆಸರೆಯಾಗಿದ್ದಾರೆ. ಇನ್ನು ಧ್ರುವ ಸರ್ಜಾ ಅವರ ಈ ಮಾನವೀಯ ಕಾರ್ಯಕ್ಕೆ ಅಭಿಮಾನಿಗಳು ಮತ್ತು ಚಿತ್ರರಂಗದ ಕಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next