Advertisement

Dhruva- Darshan ಮನಸ್ತಾಪ: ನಾಟಕೀಯವಾಗಿ ಇರಲು ನನಗೆ ಸಾಧ್ಯವಿಲ್ಲ ಎಂದ ಧ್ರುವ ಸರ್ಜಾ

01:08 PM Oct 06, 2023 | Team Udayavani |

ಬೆಂಗಳೂರು: ಕನ್ನಡ ಚಿತ್ರರಂಗದ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಇಂದು ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಕಳೆದೆರಡು ವರ್ಷಗಳಿಂದ ಬರ್ತ್ ಡೇ ಆಚರಣೆಯಿಂದ ದೂರವಿದ್ದ ಧ್ರುವ ಈ ಬಾರಿ ಅಭಿಮಾನಿಗಳೊಂದಿಗೆ ಸೇರಿ ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದಾರೆ.

Advertisement

ಇದೇ ವೇಳೆ ಚಾಲೆಂಜಿಗ್ ಸ್ಟಾರ್ ದರ್ಶನ್ ಮತ್ತು ಧ್ರುವ ಸರ್ಜಾ ನಡುವಿನ ಮನಸ್ತಾಪದ ಬಗ್ಗೆ ಚರ್ಚೆಯಾಗುತ್ತಿದೆ. ಕಳೆದ ವಾರ ಕಾವೇರಿ ಹೋರಾಟದ ಸಂದರ್ಭದಲ್ಲಿ ಇಬ್ಬರೂ ಒಂದೇ ವೇದಿಕೆಯಲ್ಲಿದ್ದರೂ ಪರಸ್ಪರ ಮಾತನಾಡಿಕೊಂಡಿರಲಿಲ್ಲ. ಇಬ್ಬರು ಸ್ಟಾರ್ ನಟರ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಮಾತುಗಳು ಕೇಳಿಬಂದಿತ್ತು.

ಇದೀಗ ಹುಟ್ಟುಹಬ್ಬದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಧ್ರುವ ಇದರ ಬಗ್ಗೆ ಹೇಳಿದ್ದಾರೆ.

“ದರ್ಶನ್ ಅವರು ಹಿರಿಯ ನಟ, ನಮ್ಮ ಸೀನಿಯರ್ ಕೂಡ ಹೌದು. ದರ್ಶನ್ ಅವರ ಅನುಪಸ್ಥಿತಿಯಲ್ಲೂ ನಾವು ಅವರಿಗೆ ಗೌರವ ಕೊಡುತ್ತೇವೆ. ಆದರೆ, ನನಗೂ ಸ್ವಾಭಿಮಾನವಿದೆ. ನಾಟಕೀಯವಾಗಿ ಇರಲು ನನಗೆ ಬರುವುದಿಲ್ಲ. ಮನಸಲ್ಲೊಂದು ಹೊರಗೊಂದು ಇರಲು ಆಗುವುದಿಲ್ಲ. ಅವರ ಬಳಿ ಕೇಳಲು ಕೆಲವು ಪ್ರಶ್ನೆಗಳು ಇವೆ. ಇದನ್ನು ಅವರ ಬಳಿಯೇ ಕೇಳಬೇಕಿದೆ. ನಾನು ಅವರೊಟ್ಟಿಗೆ ಈ ವಿಚಾರವಾಗಿ ಮಾತನಾಡುತ್ತೇನೆ. ನನ್ನಲ್ಲಿರುವ ಕೆಲವು ಗೊಂದಲದ ಪ್ರಶ್ನೆಗಳಿಗೆ ಉತ್ತರ ಸಿಗಬೇಕು.  ಕೆಲವರು ಫೇಕ್ ಅಕೌಂಟ್ ಕ್ರಿಯೇಟ್ ಮಾಡಿ ಇಲ್ಲದ ಅಪಪ್ರಚಾರ ಮಾಡುತ್ತಿದ್ದಾರೆ” ಎಂದರು.

Advertisement

Udayavani is now on Telegram. Click here to join our channel and stay updated with the latest news.

Next