Advertisement

ಡಯಾಲಿಸಿಸ್‌ ಯಂತ್ರ: ಗಮನ ಸೆಳೆದ ಶಾಸಕ ಉಮಾನಾಥ್‌ ಕೋಟ್ಯಾನ್‌

11:03 PM Feb 21, 2023 | Team Udayavani |

ಬೆಂಗಳೂರು: ಮೂಡುಬಿದರೆ ಹಾಗೂ ಮೂಲ್ಕಿ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಸಿಎಸ್‌ಆರ್‌ ಫ‌ಂಡ್‌ ಮೂಲಕ ಒದಗಿಸಿರುವ ಡಯಾಲಿಸಿಸ್‌ ಯಂತ್ರಗಳು ಸೂಕ್ತ ನಿರ್ವಹಣೆ ಇಲ್ಲದೇ ಹಾಳಾಗುತ್ತಿರುವ ಬಗ್ಗೆ ಮೂಡಬಿದರೆ ಶಾಸಕ ಉಮಾನಾಥ್‌ ಕೋಟ್ಯಾನ್‌ ವಿಧಾನಸಭೆಯಲ್ಲಿ ಪ್ರಸ್ತಾವಸಿದ್ದಾರೆ.

Advertisement

ಶೂನ್ಯವೇಳೆಯಲ್ಲಿ ಈ ವಿಚಾರ ಪ್ರಸ್ತಾವಿಸಿದ ಅವರು, ಮೂಡುಬಿದರೆ ತಾಲೂಕು ಆಸ್ಪತ್ರೆಯಲ್ಲಿ 2 ಹಾಗೂ ಮೂಲ್ಕಿ ತಾಲೂಕು ಆಸ್ಪತ್ರೆಯಲ್ಲಿ 2 ಡಯಾಲಿಸಿಸ್‌ ಕೇಂದ್ರಗಳನ್ನು ಸಿಎಸ್‌ಆರ್‌ ಫ‌ಂಡ್‌ ಮೂಲಕ ಸ್ಥಾಪಿಸಲಾಗಿದೆ. ಆದರೆ ತಾಂತ್ರಿಕ ಸಿಬಂದಿ ಕೊರತೆಯಿಂದ ಸೂಕ್ತ ನಿರ್ವಹಣೆ ಇಲ್ಲದೇ ಇವುಗಳು ಹಾಳಾಗುತ್ತಿವೆ. ಇದರಿಂದ ಅನಾರೋಗ್ಯಕ್ಕೆ ಒಳಗಾದವರು ನೆರೆಯ ತಾಲೂಕುಗಳಿಗೆ ಹೋಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಅಲೆದಾಟ ತಪ್ಪಿಸುವುದಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಸರಕಾರದ ಪರವಾಗಿ ಉತ್ತರ ನೀಡಿದ ಸಚಿವ ಮಾಧುಸ್ವಾಮಿ, ಡಯಾಲಿಸಿಸ್‌ ಕೇಂದ್ರಗಳಿಗೆ ಸಿಬಂದಿ ನಿಯೋಜನೆಗೆ ಟೆಂಡರ್‌ ಕರೆಯಲಾಗಿದೆ. ಕಾರ್ಯಾದೇಶ ನೀಡಿದ ಬಳಿಕ ಸೇವೆ ಆರಂಭಿಸಲಾಗುವುದು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next