Advertisement

ಭದ್ರಾವತಿ: ಬಜರಂಗದಳ ಯುವಕನ ಮೇಲೆ ಹಲ್ಲೆ ನಡೆಸಿದ್ದ ಡಿಚ್ಚಿ ಮುಬಾರಕ್ ಬಂಧನ

02:58 PM Aug 16, 2022 | Team Udayavani |

ಶಿವಮೊಗ್ಗ: ನಿಷೇಧಾಜ್ಞೆಯ ನಡುವೆಯೂ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬಜರಂಗದಳ ಯುವಕನ ಮೇಲೆ ಹಲ್ಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Advertisement

ಬಜರಂಗದಳ ಕಾರ್ಯಕರ್ತ ಸುನೀಲ್ ಮೇಲೆ ಹಲ್ಲೆ ನಡೆಸಿದ್ದ ಮುಬಾರಕ್ ಅಲಿಯಾಸ್ ಡಿಚ್ಚಿ ಎಬಾತನನ್ನು ಪೊಲೀಸರು ವಶಕ್ಕೆ ಪಡಿದ್ದಾರೆ.

ಸೋಮವಾರ ಭದ್ರಾವತಿಯಲ್ಲಿ ಸುನೀಲ್ ಗುಡುಗುಡಿ ಆಟ ಆಡುತ್ತಿದ್ದ. ಈ ವೇಳೆ ಮುಬಾರಕ್ ವಿಡಿಯೋ ಮಾಡಿಕೊಂಡಿದ್ದ. ಸುನೀಲ್ ಇದನ್ನು ಪ್ರಶ್ನಿಸಿದ್ದು, ಇವರಿಬ್ಬರು ಕಿರಿಕ್ ಮಾಡಿಕೊಂಡಿದ್ದರು. ಇದರ ಪ್ರತೀಕಾರವಾಗಿ ಡಿಚ್ಚಿ ಮುಬಾರಕ್ ಇಂದು ಸುನೀಲ್ ಮೇಲೆ ಹಲ್ಲೆ ಮಾಡಿದ್ದಾರೆ.

ಇದನ್ನೂ ಓದಿ:ಹುಬ್ಬಳ್ಳಿ:  ಐದು ವರ್ಷದ ಬಾಲಕಿಯ ಮೇಲೆ ಅಪ್ರಾಪ್ತ ವಯಸ್ಕ ಸಂಬಂಧಿಯಿಂದಲೇ ಅತ್ಯಾಚಾರ!

ಭದ್ರಾವತಿ ನೆಹರೂ ನಗರದ ನಿವಾಸಿಯಾಗಿರುವ ಸುನೀಲ್ ಪ್ರಸ್ತುತ ಭದ್ರಾವತಿಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ.

Advertisement

ಭದ್ರಾವತಿ ಓಲ್ಡ್ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next