Advertisement

ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

06:35 AM Oct 23, 2018 | Team Udayavani |

ರಾಮನಗರ: ರಾಮನಗರ ಕ್ಷೇತ್ರ ಉಪಚುನಾವಣೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದವರು ಗೆಲ್ಲಲು ಬೇರೆಯವರ ಅವಶ್ಯಕತೆ ಇಲ್ಲ ಎಂದು ಮಾಗಡಿ ಕ್ಷೇತ್ರದ ಮಾಜಿ ಶಾಸಕ ಎಚ್‌.ಸಿ.ಬಾಲಕೃಷ್ಣ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಷೇತ್ರದ ಜನರೇ ಅವರ ಪರ ಕುಣಿಯುತ್ತಿದ್ದಾರೆ ಎಂದರು. ಈವರೆಗೂ ನನ್ನನ್ನು ಪ್ರಚಾರಕ್ಕೆ ಆಹ್ವಾನಿಸಿಲ್ಲ. ಪ್ರಚಾರಕ್ಕೆ ಕರೆದಾಗ ಪ್ರತಿಕ್ರಿಯೆ ನೀಡುತ್ತೇನೆ ಎಂದರು.

ಬಿಜೆಪಿ ಸೇರಲ್ಲ: ಬಿಜೆಪಿ ಸೇರುವಂತೆ ಆ ಪಕ್ಷದ ಕೆಲವು ಮುಖಂಡರು ತಮ್ಮನ್ನು ಸಂಪರ್ಕಿಸಿದ್ದು ನಿಜ. ಆದರೆ ತಾವು ಬಿಜೆಪಿ ಸೇರುವುದಿಲ್ಲ ಎಂದು ಬಾಲಕೃಷ್ಣ ಸ್ಪಷ್ಟಪಡಿಸಿದರು.ಕಾಂಗ್ರೆಸ್‌ನಲ್ಲಿ ತಮಗೇನು ಅಗೌರವ ಆಗಿಲ್ಲ.ಪಕ್ಷ ಬದಲಾವಣೆ ಗೌರವ ತರುವುದಿಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಉಪಚುನಾವಣೆಯಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಕುರಿತು ವೈಯಕ್ತಿಕ ಅಭಿಪ್ರಾಯ ಹೇಳುವ ಸ್ಥಿತಿಯಲ್ಲಿ ತಾವಿಲ್ಲ. ಪಕ್ಷದ ಅಭಿಪ್ರಾಯ ಹೇಳಬಹುದಷ್ಟೆ. ತಮ್ಮ ವೈಯಕ್ತಿಕ ಅಭಿಪ್ರಾಯವನ್ನು ಪಕ್ಷದ ವೇದಿಕೆಯಲ್ಲಿ ಮಂಡಿಸಿದ್ದೇನೆಂದು ಅವರು ಪ್ರತಿಕ್ರಿಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next